9:24 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ: ಮಣ್ಣಿನಡಿ ಸಿಲುಕಿ ಮೃತಪಟ್ಟ ಇಬ್ಬರು ಕಂದಮ್ಮಗಳಿಗೆ ಊರವರ ಕಣ್ಣೀರಿನ ವಿದಾಯ

03/08/2022, 19:18

ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ಇಲ್ಲಿನ ಕುಮಾರಧಾರ ಬಳಿಯ ಪರ್ವತಮುಖೀಯಲ್ಲಿ ಮನೆ ಮೇಲೆ ಗುಡ್ಡ ಕುಸಿತದಿಂದ ಸಾವನ್ನಪ್ಪಿದ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಇಡೀ ಸುಬ್ರಹ್ಮಣ್ಯದ ಜನತೆ ಕಣ್ಣೀರ ವಿದಾಯ ಹೇಳಿದರು.

ಸೋಮವಾರ ರಾತ್ರಿ ಸುಮಾರು 8.30ರ ವೇಳೆಗೆ ಭಾರೀ ಮಳೆಯಿಂದಾಗಿ ಪರ್ವತಮುಖಿ ಬಳಿ ಕುಸುಮಾಧರ ಎಂಬವರ ಮನೆ ಮೇಲೆ ಗುಡ್ಡ ಕುಸಿದು ಬಿದ್ದಿತ್ತು. ಮನೆಯೊಳಗೆ ಮಣ್ಣಿನಡಿ ಸಿಲುಕಿದ್ದ ಸಹೋದರಿಯರಾದ ಶ್ರುತಿ (11) ಮತ್ತು ಗಾನಶ್ರೀ (6) ಮೃತಪಟ್ಟಿದ್ದರು. ಮೃತ ಮಕ್ಕಳ

ಅಂತ್ಯಸಂಸ್ಕಾರ ಪಂಜ ಕರಿಮಜಲಿನಲ್ಲಿ ನಡೆಸಲಾಯಿತು. ಇಡೀ ಊರಿಗೆ ಊರೇ ದುಃಖತಪ್ತವಾಗಿತ್ತು. ಮಕ್ಕಳ ಸಾವಿಗೆ ಸುಬ್ರಹ್ಮಣ್ಯ ಪರಿಸರದ ಜನರು ಕಣ್ಣೀರು ಹರಿಸಿದರು.

ಪಂಜದ ಕರಿಮಜಲು ಕುಸುಮಾಧರ ಮತ್ತು ರೂಪಶ್ರೀ ದಂಪತಿಯ ಮಕ್ಕಳಾದ ಶ್ರುತಿ  ಮತ್ತು ಗಾನಶ್ರೀ ಇವರಲ್ಲಿ ಶ್ರುತಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯಲ್ಲಿ 5ನೇ ತರಗತಿ ಹಾಗೂ ಗಾನಶ್ರೀ ಸುಬ್ರಹ್ಮಣ್ಯ ಸರಕಾರಿ ಹಿರಿಯ 

ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ಕಲಿಯುತ್ತಿದ್ದರು. ಅಂದು ಸೋಮವಾರ ಸಂಜೆಯಿಂದಲೇ ಧಾರಾಕಾರ ಮಳೆ ಸುಬ್ರಹ್ಮಣ್ಯ ಪರಿಸರದಲ್ಲಿ ಸರಿಯಲಾರಂಭಿಸಿತ್ತು. ರಾತ್ರಿ ಸುಮಾರು 8.30ರ ವೇಳೆಗೆ ಪರ್ವತಮುಖಿಯಲ್ಲಿ ಕುಸುಮಾಧರ ಎಂಬವರ ಮನೆಯ ಹಿಂಭಾಗಕ್ಕೆ ಗುಡ್ಡ ಕುಸಿದು ಬಿತ್ತು. ಭಾರೀ ಶಬ್ದಕ್ಕೆ ತಾಯಿ ರೂಪಾಶ್ರೀ ಅವರು ಇನ್ನೊಂದು ಮಗುವಿನ ಜತೆ ಹೊರಗೋಡಿ ಬಂದರೆ, ಒಳಗಿನ ಕೋಣೆಯಲ್ಲಿ ಓದುತ್ತಿದ್ದ ಸಹೋದರಿಯರಾದ ಶ್ರುತಿ ಹಾಗೂ ಗಾನಶ್ರೀ ಅವರು ಮಣ್ಣಿನಡಿಗೆ ಸಿಲುಕಿದ್ದರು. ಮಕ್ಕಳ ರಕ್ಷಣೆಗೆ ತಕ್ಷಣ ಜೇಸಿಬಿ ಕಾರ್ಯಾಚರಣೆ ಆರಂಭಿಸಿದರು. ಆದರೆ ಮಣ್ಣಿನಿಂದ ಹೊರ ತೆಗೆಯುವ ವೇಳೆ ಇಬ್ಬರು ಮಕ್ಕಳು ಇಹಲೋಕ ತ್ಯಜಿಸಿದ್ದರು. ಮನೆ ಮಂದಿ ಹಾಗೂ ಊರವರು

ಆ ದೇವರಲ್ಲಿ ಮಾಡಿದ ಪ್ರಾರ್ಥನೆ ಫಲಿಸಲೇ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು