9:14 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಬಸವಣ್ಣನ ನಾಡು ವಿಜಯಪುರದಲ್ಲಿ ಮರ್ಯಾದಾ ಹತ್ಯೆ: ತಂದೆಯಿಂದಲೇ ಅಪ್ರಾಪ್ತ ಪುತ್ರಿ ಮತ್ತು ಆಕೆಯ ಪ್ರಿಯಕರ ಕೊಲೆ

22/06/2021, 22:28

ವಿಜಯಪುರ(reporterkarnataka news): ಬಸವಣ್ಣನ ನಾಡಿನಲ್ಲಿ ಘನಘೋರ ಕೃತ್ಯ ನಡೆದಿದೆ. ಇಬ್ಬರು ಅಪ್ರಾಪ್ತ ವಯಸ್ಸಿನ ಪ್ರೇಮಿಗಳನ್ನು ಹತ್ಯೆ ಮಾಡಲಾಗಿದೆ. ಮರ್ಯಾದೆಯ ಹೆಸರಿನಲ್ಲಿ ಮರ್ಯಾದೆಗೇಡು ಕೃತ್ಯವನ್ನು ಮಂಗಳವಾರ ಎಸಗಲಾಗಿದೆ.

ವಿಜಯಪುರ ಜಿಲ್ಲೆಯ ದೇವರ ಹುಪ್ಪರಗಿಯ ಕಲಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ತಂದೆಯೇ ಈ ಕೃತ್ಯ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಸಲಾದಹಳ್ಳಿ ಗ್ರಾಮದ ಬಸವರಾಜ ಬಡಿಗೇರಿ ಹಾಗೂ ಅಪ್ರಾಪ್ತ ವಯಸ್ಸಿನ ಬಾಲಕಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರ ಜಾತಿಯೂ ಬೇರೆಯಾಗಿತ್ತು. ಬಸವರಾಜ ಬಡಿಗೇರಿಗೆ 18 ವರ್ಷವಾದರೆ, ಬಾಲಕಿಗೆ 16 ವರ್ಷ. ಇವರ ಪ್ರೀತಿಗೆ ಬಾಲಕಿಯ ತಂದೆಯ ವಿರೋಧವಿತ್ತು. ಹುಡುಗನ ಜತೆ ಸಲುಗೆಯಿಂದ ಇರದಂತೆ ಬಾಲಕಿಗೆ ಆಕೆಯ ಅಪ್ಪ ಪದೇ ಪದೇ ಎಚ್ಚರಿಕೆ ನೀಡುತ್ತಿದ್ದ. ಮಂಗಳವಾರ ಇಬ್ಬರು ಪ್ರೇಮಿಗಳು ಜತೆಯಾಗಿ ಇರುವುದನ್ನು ಕಂಡು ಕ್ರೋಧಗೊಂಡ ಬಾಲಕಿಯ ತಂದೆ ತನ್ನ ಪುತ್ರಿ ಮತ್ತು ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು