8:58 PM Friday19 - December 2025
ಬ್ರೇಕಿಂಗ್ ನ್ಯೂಸ್
Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ

ಇತ್ತೀಚಿನ ಸುದ್ದಿ

ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪ: ಸೆನ್ ಠಾಣೆಯಲ್ಲಿ‌ ವ್ಯಕ್ತಿಯ ವಿರುದ್ಧ ಕೇಸ್ ದಾಖಲು

05/08/2022, 11:22

ಬೈಂದೂರು(reporterkarnataka.com):ಮಂಗಳೂರು ಪ್ರವೀಣ್ ನೆಟ್ಟಾರು ಮತ್ತು ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಬೈಂದೂರಿನ ವ್ಯಕ್ತಿಯೋರ್ವರ ಮೇಲೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಕ್ಷ್ಮೀಕಾಂತ ಬೈಂದೂರು ಎಂಬ ಫೇಸ್ ಬುಕ್ ಖಾತೆದಾರನ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಲಕ್ಷ್ಮೀಕಾಂತ ಬೈಂದೂರು ಎಂಬ ಫೇಸ್ ಬುಕ್ ಖಾತೆದಾರ ಆತನ ಫೇಸ್ ಬುಕ್ ಖಾತೆಯಲ್ಲಿ ಮಂಗಳೂರಿನಲ್ಲಿ ಕೊಲೆಯಾಗಿ ಮೃತಪಟ್ಟಿರುವ ಪ್ರವೀಣ್ ಎಂಬಾತನ ಫೋಟೋವನ್ನು ಬಳಸಿ ಒಂದು ಕೊಲೆಗೆ ಪ್ರತಿಕಾರ ಹೇಗಿತ್ತು ಎಂಬುದಾಗಿ ಪ್ರಚೋದನಾಕಾರಿ  ಬರಹವನ್ನು ಬರೆದು ಪೋಸ್ಟ್ ಮಾಡಿರುವುದು ಹಾಗೂ ದಿನಪತ್ರಿಕೆಯಲ್ಲಿ ಬಂದಿರುವ ಮಂಗಳೂರಿನಲ್ಲಿ ನಡೆದ ಫಾಜಿಲ್  ಹತ್ಯೆಯ ಆರೋಪಿಗಳ ಫೋಟೋವನ್ನು ಬಳಸಿ, “ ಇವತ್ತಿನ ಹೀರೋಗಳು ” ಎಂಬ ಬರಹವನ್ನು ಬರೆದು ಪೋಸ್ಟ್ ಮಾಡಿದ್ದು, ಈ ರೀತಿಯಾಗಿ ಸುಳ್ಳು, ಪ್ರಚೋದನಾಕಾರಿ ಹಾಗೂ ಕೋಮು ಪ್ರಚೋದನೆ ಪೋಸ್ಟ್ ನ್ನು ಹರಿಯಬಿಟ್ಟಿರುವುದು ಕಂಡುಬಂದಿದ್ದು ಈತನ ವಿರುದ್ದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರಿನ ಅನ್ವಯ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು