2:52 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕೋಟಿ ವೆಚ್ಚದ ರಸ್ತೆ 2 ತಿಂಗಳಲ್ಲೇ ಢಮಾರ್!; ಕಳಪೆ ಕಾಮಗಾರಿಯ ನಿಜ ಬಣ್ಣ ಬಯಲು!!

05/08/2022, 18:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂದು

info.reporterkarnataka@gmail.com

ಕೋಟಿ ವೆಚ್ಚ ಮಾಡಿ ಹೊಸತಾಗಿ ನಿರ್ಮಿಸಿದ ಡಾಮರು ರಸ್ತೆ ಎರಡೇ ತಿಂಗಳಲ್ಲಿ ಕಿತ್ತು ಹೋದ ಘಟನೆ ಚಿಕ್ಕಮಗಳೂರು ತಾಲೂಕಿನ ತಿರುಗುಣ ಗ್ರಾಮದಲ್ಲಿ ನಡೆದಿದೆ.

ಕಳಪೆ ಕಾಮಗಾರಿಯಿಂದ ಕೋಟಿ ವೆಚ್ಚದ ರಸ್ತೆ ಕೆಟ್ಟು ಹೋಗಿದೆ. ಕಿತ್ತು ಬರ್ತೀರೋ ಟಾರ್ ಕಂಡು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಸ್ತೆಗೆ ಹಾಕಿದ ಡಾಮರು ಚಾಪೆಯಂತೆ ಎದ್ದೇಳುತ್ತಿದೆ. ಇದನ್ನು ಕಂಡು ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ.


ರಸ್ತೆ ಮಾಡಲು ತಮ್ಮ ಸ್ವಂತ ಜಮೀನನ್ನು ಕೂಡ ರೈತರು ಬಿಟ್ಟುಕೊಟ್ಟಿದ್ದರು. ಇದೀಗ ಎರಡೇ ಎರಡು ತಿಂಗಳಲ್ಲಿ ಕಳಪೆ ರಸ್ತೆಯ ನಿಜಬಣ್ಣ ಬಯಲಾಗಿದೆ.

ಗುತ್ತಿಗೆದಾರ ಹುಲಿಯಪ್ಪಗೌಡ ಎಂಬುವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಗುತ್ತಿಗೆದಾರ, ಎಂಜಿನಿಯರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಗೆ ಕಳಪೆ ಕಾಮಗಾರಿಯ ಕರ್ಮಕಾಂಡ ಬೆಳಕಿಗೆ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು