10:07 AM Friday3 - May 2024
ಬ್ರೇಕಿಂಗ್ ನ್ಯೂಸ್
ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕೋಟಿ ವೆಚ್ಚದ ರಸ್ತೆ 2 ತಿಂಗಳಲ್ಲೇ ಢಮಾರ್!; ಕಳಪೆ ಕಾಮಗಾರಿಯ ನಿಜ ಬಣ್ಣ ಬಯಲು!!

05/08/2022, 18:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂದು

info.reporterkarnataka@gmail.com

ಕೋಟಿ ವೆಚ್ಚ ಮಾಡಿ ಹೊಸತಾಗಿ ನಿರ್ಮಿಸಿದ ಡಾಮರು ರಸ್ತೆ ಎರಡೇ ತಿಂಗಳಲ್ಲಿ ಕಿತ್ತು ಹೋದ ಘಟನೆ ಚಿಕ್ಕಮಗಳೂರು ತಾಲೂಕಿನ ತಿರುಗುಣ ಗ್ರಾಮದಲ್ಲಿ ನಡೆದಿದೆ.

ಕಳಪೆ ಕಾಮಗಾರಿಯಿಂದ ಕೋಟಿ ವೆಚ್ಚದ ರಸ್ತೆ ಕೆಟ್ಟು ಹೋಗಿದೆ. ಕಿತ್ತು ಬರ್ತೀರೋ ಟಾರ್ ಕಂಡು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಸ್ತೆಗೆ ಹಾಕಿದ ಡಾಮರು ಚಾಪೆಯಂತೆ ಎದ್ದೇಳುತ್ತಿದೆ. ಇದನ್ನು ಕಂಡು ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ.


ರಸ್ತೆ ಮಾಡಲು ತಮ್ಮ ಸ್ವಂತ ಜಮೀನನ್ನು ಕೂಡ ರೈತರು ಬಿಟ್ಟುಕೊಟ್ಟಿದ್ದರು. ಇದೀಗ ಎರಡೇ ಎರಡು ತಿಂಗಳಲ್ಲಿ ಕಳಪೆ ರಸ್ತೆಯ ನಿಜಬಣ್ಣ ಬಯಲಾಗಿದೆ.

ಗುತ್ತಿಗೆದಾರ ಹುಲಿಯಪ್ಪಗೌಡ ಎಂಬುವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಗುತ್ತಿಗೆದಾರ, ಎಂಜಿನಿಯರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಗೆ ಕಳಪೆ ಕಾಮಗಾರಿಯ ಕರ್ಮಕಾಂಡ ಬೆಳಕಿಗೆ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು