11:15 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಕೆಐಒಸಿಎಲ್: ಮಂಗಳೂರು 2 ಯೋಜನೆ  ಸೇರಿದಂತೆ ಒಟ್ಟು 4 ಯೋಜನೆಗಳಿಗೆ ಕೇಂದ್ರ ಆಸ್ತು

23/06/2021, 07:59

ಮಂಗಳೂರು(reporterkarnataka news); ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯ  ಮಂಗಳೂರಿನಲ್ಲಿ ಮಾಡಲುದ್ದೇಶಿಸಿದ ಎರಡು ಯೋಜನೆಗಳು ಸೇರಿದಂತೆ ಒಟ್ಟು ನಾಲ್ಕು ವಿವಿಧ ಯೋಜನೆಗಳಿಗೆ ಕೇಂದ್ರ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ.

ಕೇಂದ್ರ ಪೆಟ್ರೋಲಿಯಂ ಹಾಗೂ ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್  ಅವರು ವರ್ಚುವಲ್ ಸಭೆಯಲ್ಲಿ ಈ ವಿಷಯ ತಿಳಿಸಿದರು.

ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯು ತನ್ನ ಸಿ.ಎಸ್.ಆರ್. ವತಿಯಿಂದ  ಮೂಡಬಿದಿರೆಯ ಸರ್ಕಾರಿ ಆಸ್ಪತ್ರೆಗೆ  50 ಹಾಸಿಗೆಗಳನ್ನು ಒಟ್ಟು ರೂ. 18.00 ಲಕ್ಷ ವೆಚ್ಚದಲ್ಲಿ ನೀಡುವ ಕಾರ್ಯಕ್ರಮ ಹಾಗೂ ಮಂಗಳೂರಿನ ಕೆ.ಐ.ಒ.ಸಿ.ಎಲ್ ಪೆಲೆಟ್ ಪ್ಲಾಂಟ್ ನ ಆಧುನೀಕರಣದ ಅಂಗವಾಗಿ   ಸುಮಾರು 17.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಬ್ಯಾರೆಲ್ ಟೈಪ್ ಬ್ಲೆಂಡರ್ ರೆಕ್ಲೈಮರ್ (Barrel Type Blender Reclaimer) ನ್ನು ಕೇಂದ್ರ ಸಚಿವರು ಉದ್ಘಾಟಿಸಿದರು. 

ಕೋವಿಡ್ 19 ವೈರಾಣು ರೋಗದ ವಿರುದ್ದ ಹೋರಾಡುವ ನಿಟ್ಟಿನಲ್ಲಿ ಕುದುರೆಮುಖ ಕಂಪೆನಿಯು ತನ್ನ ಸಿ.ಎಸ್.ಆರ್. ವತಿಯಿಂದ ಈಗಾಗಲೇ ಜಿಲ್ಲಾಡಳಿತಕ್ಕೆ ಅಂಬುಲೆನ್ಸ್, ವೆಂಟಿಲೇಟರ್ ಸೇರಿದಂತೆ ಉಪ್ಪಿನಂಗಡಿ ಹಾಗೂ ಮೂಡಬಿದಿರೆಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ 250LPM (ಲೀಟರ್ ಪರ್ ಮಿನಿಟ್) ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕವನ್ನು ನೀಡುತ್ತಿರುವುದಕ್ಕಾಗಿ ಕೇಂದ್ರ ಪೆಟ್ರೋಲಿಯಂ ಹಾಗೂ ಉಕ್ಕು ಖಾತೆಯ ಸಚಿವರ

ಧರ್ಮೇಂದ್ರ ಪ್ರಧಾನ್ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.ಸಂಸದ ನಳಿನ್ ಕುಮಾರ್ ಕಟೀಲ್, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಮಹಾ ಸ್ವಾಮೀಜಿ, ಉಪಮುಖ್ಯಮಂತ್ರಿ ಡಾ. ಸಿ.ಎನ್. ಆಶ್ವಥ ನಾರಾಯಣ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು