2:55 AM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ಕೆಐಒಸಿಎಲ್: ಮಂಗಳೂರು 2 ಯೋಜನೆ  ಸೇರಿದಂತೆ ಒಟ್ಟು 4 ಯೋಜನೆಗಳಿಗೆ ಕೇಂದ್ರ ಆಸ್ತು

23/06/2021, 07:59

ಮಂಗಳೂರು(reporterkarnataka news); ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯ  ಮಂಗಳೂರಿನಲ್ಲಿ ಮಾಡಲುದ್ದೇಶಿಸಿದ ಎರಡು ಯೋಜನೆಗಳು ಸೇರಿದಂತೆ ಒಟ್ಟು ನಾಲ್ಕು ವಿವಿಧ ಯೋಜನೆಗಳಿಗೆ ಕೇಂದ್ರ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ.

ಕೇಂದ್ರ ಪೆಟ್ರೋಲಿಯಂ ಹಾಗೂ ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್  ಅವರು ವರ್ಚುವಲ್ ಸಭೆಯಲ್ಲಿ ಈ ವಿಷಯ ತಿಳಿಸಿದರು.

ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯು ತನ್ನ ಸಿ.ಎಸ್.ಆರ್. ವತಿಯಿಂದ  ಮೂಡಬಿದಿರೆಯ ಸರ್ಕಾರಿ ಆಸ್ಪತ್ರೆಗೆ  50 ಹಾಸಿಗೆಗಳನ್ನು ಒಟ್ಟು ರೂ. 18.00 ಲಕ್ಷ ವೆಚ್ಚದಲ್ಲಿ ನೀಡುವ ಕಾರ್ಯಕ್ರಮ ಹಾಗೂ ಮಂಗಳೂರಿನ ಕೆ.ಐ.ಒ.ಸಿ.ಎಲ್ ಪೆಲೆಟ್ ಪ್ಲಾಂಟ್ ನ ಆಧುನೀಕರಣದ ಅಂಗವಾಗಿ   ಸುಮಾರು 17.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಬ್ಯಾರೆಲ್ ಟೈಪ್ ಬ್ಲೆಂಡರ್ ರೆಕ್ಲೈಮರ್ (Barrel Type Blender Reclaimer) ನ್ನು ಕೇಂದ್ರ ಸಚಿವರು ಉದ್ಘಾಟಿಸಿದರು. 

ಕೋವಿಡ್ 19 ವೈರಾಣು ರೋಗದ ವಿರುದ್ದ ಹೋರಾಡುವ ನಿಟ್ಟಿನಲ್ಲಿ ಕುದುರೆಮುಖ ಕಂಪೆನಿಯು ತನ್ನ ಸಿ.ಎಸ್.ಆರ್. ವತಿಯಿಂದ ಈಗಾಗಲೇ ಜಿಲ್ಲಾಡಳಿತಕ್ಕೆ ಅಂಬುಲೆನ್ಸ್, ವೆಂಟಿಲೇಟರ್ ಸೇರಿದಂತೆ ಉಪ್ಪಿನಂಗಡಿ ಹಾಗೂ ಮೂಡಬಿದಿರೆಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ 250LPM (ಲೀಟರ್ ಪರ್ ಮಿನಿಟ್) ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕವನ್ನು ನೀಡುತ್ತಿರುವುದಕ್ಕಾಗಿ ಕೇಂದ್ರ ಪೆಟ್ರೋಲಿಯಂ ಹಾಗೂ ಉಕ್ಕು ಖಾತೆಯ ಸಚಿವರ

ಧರ್ಮೇಂದ್ರ ಪ್ರಧಾನ್ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.ಸಂಸದ ನಳಿನ್ ಕುಮಾರ್ ಕಟೀಲ್, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಮಹಾ ಸ್ವಾಮೀಜಿ, ಉಪಮುಖ್ಯಮಂತ್ರಿ ಡಾ. ಸಿ.ಎನ್. ಆಶ್ವಥ ನಾರಾಯಣ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು