5:50 PM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಆರ್ ಬಿಐನಿಂದ ಮತ್ತೆ ರೆಪೋ ದರ ಹೆಚ್ಚಳ: ಗೃಹ, ವಾಹನ ಸಾಲದ ಇಎಂಐ ಹೊರೆ ಏರಿಕೆ

06/08/2022, 11:46

ಹೊಸದಿಲ್ಲಿ(reporterkarnataka.com): ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೆ ಪ್ರಮುಖ ಬಡ್ಡಿದರವನ್ನು 50 ಬೇಸಿಸ್ ಪಾಯಿಂಟ್ಸ್ ಗಳಷ್ಟು ಏರಿಸಿದೆ. ಇದರೊಂದಿಗೆ ಬಡ್ಡಿದರ ಶೇ.5.40ಕ್ಕೆ ಏರಿಕೆಯಾದಂತಾಗಿದೆ.

ದೇಶದಲ್ಲಿನ ಹಣದುಬ್ಬರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಸತತ ಮೂರನೇ ಬಾರಿ ಬಡ್ಡಿದರವನ್ನು ಏರಿಕೆ ಮಾಡಿದ್ದು, ಇದರ ಪರಿಣಾಮ ಗೃಹ, ವಾಹನ ಸಾಲಗಾರರಿಗೆ ಮತ್ತಷ್ಟು ಹೊರೆ ಬಿದ್ದಂತಾಗಿದೆ.

ಜೂನ್ ತಿಂಗಳಿನಲ್ಲಿ ಚಿಲ್ಲರೆ ಹಣದುಬ್ಬರ ಶೇ.7ಕ್ಕೆ ಏರಿಕೆಯಾಗಿತ್ತು. ಇದು ಆರ್ ಬಿಐನ ನಿರೀಕ್ಷಿತ ಶೇ.2ರಿಂದ 6ರ ಮಟ್ಟಕ್ಕಿಂತ ಹೆಚ್ಚಳವಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ (ಎಂಪಿಸಿ) ಮೂಲ ರೆಪೋ ದರವನ್ನು 50 ಬೇಸಿಸ್ ಪಾಯಿಂಟ್ಸ್ ಗಳಷ್ಟು ಹೆಚ್ಚಳ ಮಾಡಿರುವುದಾಗಿ ತಿಳಿಸಿದೆ.

ಕಳೆದ ಮೇ ತಿಂಗಳಿನಲ್ಲಿ ಆರ್ ಬಿಐ ರೆಪೋ ದರವನ್ನು 40 ಬೇಸಿಸ್ ಪಾಯಿಂಟ್ಸ್ ಗಳಷ್ಟು ಏರಿಕೆ ಮಾಡಿದ್ದು, ಜೂನ್ ತಿಂಗಳಿನಲ್ಲಿ 50 ಬೇಸಿಸ್ ಪಾಯಿಂಟ್ಸ್ ಗಳಷ್ಟು ಹೆಚ್ಚಿಸಿತ್ತು. ಹಣದುಬ್ಬರ ನಿಯಂತ್ರಣ ಮತ್ತು ಆರ್ಥಿಕ ಸ್ಥಿರತೆಗಾಗಿ ರೆಪೋ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು