9:17 PM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ನೆರೆ ಹಾವಳಿಗೆ ಕೇಂದ್ರದ ಅನುದಾನ ಕೇಳಲು ರಾಜ್ಯ ಬಿಜೆಪಿಗೆ ದಮ್ಮು ಇಲ್ಲ; ಪ್ರತಿಪಕ್ಷದ ಉಪ ನಾಯಕ ಖಾದರ್ ಕಿಡಿ

06/08/2022, 20:40

ಮಂಗಳೂರು(reporterkarnataka.com): ರಾಜ್ಯದಲ್ಲಿ ಜನರು ಅತಿವೃಷ್ಠಿ ಹಾಗೂ ನೆರೆ ಹಾವಳಿಯಿಂದ ತತ್ತರಿಸಿ ಹೋಗಿದ್ದಾರೆ. ಆದರೆ ರಾಜ್ಯ ಸರಕಾರದ ಬಳಿ ಈಗ ಅತಿವೃಷ್ಟಿಗೆ ಯಾವುದೇ ಯೋಜನೆಗಳಿಲ್ಲ. ಹಾಗೇ ಕೇಂದ್ರದಿಂದ ಅನುದಾನ ಕೇಳುವ ಧೈರ್ಯವೂ ಇವರಿಗಿಲ್ಲ.

ಇದರಿಂದ ಸಂತ್ರಸ್ತರು ಅನಾಥರಾಗಿದ್ದಾರೆ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಹೇಳಿದರು.

ನಗರದಲ್ಲಿ ಶನಿವಾರ ಮಾಧ್ಯಮ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿವೃಷ್ಠಿ ಹಾಗೂ ನೆರೆ ಹಾವಳಿಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಆದರೆ 25 ಮಂದಿ ಸಂಸದರು ಮತ್ತು ರಾಜ್ಯ ಸರ್ಕಾರ ಗೃಹ ಸಚಿವರ ಬಳಿ ಎನ್‌ಡಿಆರ್‌ಫ್ ಅನುದಾನ ಯಾಕೆ ಕೇಳುತ್ತಿಲ್ಲ ಎಂದು ಪ್ರಶ್ನಿಸಿದರು.

ಕೇಂದ್ರ ಗೃಹ ಸಚಿವರು ಮೊನ್ನೆ ಬೆಂಗಳೂರಿಗೆ ಬಂದಾಗ ಅವರ ಬಳಿ ಪಕ್ಷದ ಬಗ್ಗೆ ಮಾತನಾಡುತ್ತಾರೆ ಹೊರತು ಎನ್‌ಡಿಆರ್‌ಎಫ್ ಅನುದಾನ ಕೇಳಲು ಇವರಿಗೆ ಬಾಯಿ ಬರುವುದಿಲ್ಲ. ಇವರು ಜನರನ್ನು ಉಳಿಸುವ ಬದಲು ಪಕ್ಷ ಉಳಿಸುವ ಬಗ್ಗೆ ಗೃಹ ಸಚಿವರಲ್ಲಿ ಮಾತನಾಡುತ್ತಾರೆ ಎಂದು ಖಾದರ್ ಕಿಡಿ ಕಾರಿದರು.

ಬಿಜೆಪಿಯವರಿಗೆ ಕೇಂದ್ರದ ಬಳಿ ಅನುದಾನ ಕೇಳಲು ಮುಜುಗರ ಮತ್ತು ಭಯ ಆಗೋದಾದರೆ ಸರ್ವಪಕ್ಷದ ನಿಯೋಗ ಕರೆದುಕೊಂಡು ಹೋಗಲಿ. ರಾಜ್ಯದ ಪರವಾಗಿ ನಾವು ಮಾತನಾಡುತ್ತೇವೆ. ಸುಳ್ಯ ಸಂಪಾಜೆಗೆ ವಿಶೇಷ ತಂಡ ಕಳುಹಿಸಿ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಶಾಂತಿ- ಸಾಮರಸ್ಯಕ್ಕೆ ಜಿಲ್ಲಾಡಳಿತದ ಯಾವುದೇ ತೀರ್ಮಾನಕ್ಕೆ ನಾವು ಬದ್ಧ. ಆದರೆ ಈಗ 3 ಪರ್ಸೆಂಟ್ ಸಮಾಜಘಾತುಕರಿಗೆ ಹೆದರಿ 97 ಶೇಕಡಾ ಜನರಿಗೆ ಕಷ್ಟ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು