3:29 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಅಮೃತ ಮಹೋತ್ಸವ; ಆ. 10ರಂದು  ನೆಹರೂ ಪ್ರತಿಮೆಯಿಂದ ಗಾಂಧಿ ಪುತ್ಥಳಿ ವರೆಗೆ ಪಕ್ಷಾತೀತ ಪಾದಯಾತ್ರೆ: ಮಾಜಿ ಶಾಸಕ ಲೋಬೊ

06/08/2022, 20:54

ಮಂಗಳೂರು(reporterkarnataka.com): ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಗರದಲ್ಲಿ ಆ. 10ರಂದು ಕಾಂಗ್ರೆಸ್ ನೇತೃತ್ವದಲ್ಲಿ ಪಕ್ಷಾತೀತವಾಗಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಮುಖಂಡ ಜೆ.ಆರ್.ಲೋಬೊ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಪಾಂಡೇಶ್ವರದಲ್ಲಿರುವ ಜವಹರಲಾಲ್ ನೆಹರೂ ಅವರ ಪ್ರತಿಮೆಗೆ ಬೆಳಿಗ್ಗೆ 9.30ಕ್ಕೆ ಹೂವಿನ ಹಾರ ಹಾಕುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಗುತ್ತದೆ ಎಂದರು.

ಪಾದಯಾತ್ರೆಯು ಎ.ಬಿ.ಶೆಟ್ಟಿ ವೃತ್ತ, ಗಡಿಯಾರ ಗೋಪುರ, ಕೊಡಿಯಾಲ್ ಬೈಲ್, ಪಿ.ವಿ.ಎಸ್ ವೃತ್ತ, ಬೆಸೆಂಟ್ ಕಾಲೇಜು ಮಾರ್ಗವಾಗಿ ಲಾಲ್‌ಬಾಗ್ ವೃತ್ತದವರೆಗೆ ಸಾಗಲಿದೆ. ಲಾಲ್‌ಬಾಗ್‌ನ ಗಾಂಧಿ ಪುತ್ಥಳಿಗೆ ಹಾರ ಹಾಕುವ ಮೂಲಕ ಪಾದಯಾತ್ರೆ ಸಂಪನ್ನಗೊಳ್ಳಲಿದೆ.

ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಲಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಶಾಹುಲ್ ಹಮೀದ್, ಪ್ರಕಾಶ್ ಸಾಲ್ಯಾನ್, ಟಿ.ಕೆ.ಸುಧೀರ್, ಅಬ್ದುಲ್ ಸಲೀಂ, ಸುನಿಲ್ ಪೂಜಾರಿ, ರಾಕೇಶ್ ದೇವಾಡಿಗ, ಹೈದರಾಲಿ, ರಿತೇಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು