2:46 AM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಅಮೃತ ಮಹೋತ್ಸವ; ಆ. 10ರಂದು  ನೆಹರೂ ಪ್ರತಿಮೆಯಿಂದ ಗಾಂಧಿ ಪುತ್ಥಳಿ ವರೆಗೆ ಪಕ್ಷಾತೀತ ಪಾದಯಾತ್ರೆ: ಮಾಜಿ ಶಾಸಕ ಲೋಬೊ

06/08/2022, 20:54

ಮಂಗಳೂರು(reporterkarnataka.com): ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಗರದಲ್ಲಿ ಆ. 10ರಂದು ಕಾಂಗ್ರೆಸ್ ನೇತೃತ್ವದಲ್ಲಿ ಪಕ್ಷಾತೀತವಾಗಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಮುಖಂಡ ಜೆ.ಆರ್.ಲೋಬೊ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಪಾಂಡೇಶ್ವರದಲ್ಲಿರುವ ಜವಹರಲಾಲ್ ನೆಹರೂ ಅವರ ಪ್ರತಿಮೆಗೆ ಬೆಳಿಗ್ಗೆ 9.30ಕ್ಕೆ ಹೂವಿನ ಹಾರ ಹಾಕುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಗುತ್ತದೆ ಎಂದರು.

ಪಾದಯಾತ್ರೆಯು ಎ.ಬಿ.ಶೆಟ್ಟಿ ವೃತ್ತ, ಗಡಿಯಾರ ಗೋಪುರ, ಕೊಡಿಯಾಲ್ ಬೈಲ್, ಪಿ.ವಿ.ಎಸ್ ವೃತ್ತ, ಬೆಸೆಂಟ್ ಕಾಲೇಜು ಮಾರ್ಗವಾಗಿ ಲಾಲ್‌ಬಾಗ್ ವೃತ್ತದವರೆಗೆ ಸಾಗಲಿದೆ. ಲಾಲ್‌ಬಾಗ್‌ನ ಗಾಂಧಿ ಪುತ್ಥಳಿಗೆ ಹಾರ ಹಾಕುವ ಮೂಲಕ ಪಾದಯಾತ್ರೆ ಸಂಪನ್ನಗೊಳ್ಳಲಿದೆ.

ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರು ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಲಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಶಾಹುಲ್ ಹಮೀದ್, ಪ್ರಕಾಶ್ ಸಾಲ್ಯಾನ್, ಟಿ.ಕೆ.ಸುಧೀರ್, ಅಬ್ದುಲ್ ಸಲೀಂ, ಸುನಿಲ್ ಪೂಜಾರಿ, ರಾಕೇಶ್ ದೇವಾಡಿಗ, ಹೈದರಾಲಿ, ರಿತೇಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು