2:27 AM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಶನಿವಾರಸಂತೆ ಹಾಗೂ ಗೌಡಳ್ಳಿ ಗ್ರಾಮ ಪಂಚಾಯಿತಿ: ಖಾಸಗಿ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಕರವೇ ವಿರೋಧ; ಯಾಕೆ ಓದಿ ನೋಡಿ

07/08/2022, 10:26

ಮಡಿಕೇರಿ(reporterkarnataka.com):
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹಾಗೂ ಗೌಡಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಣ್ಣಿನ ಶಿಬಿರ ನಡೆಯುತ್ತಿರುವುದು ಸ್ವಾಗತಾರ್ಹ. ಆದರೆ ಖಾಸಗಿ ಆಸ್ಪತ್ರೆಯಿಂದ ಕಣ್ಣಿನ ಚಿಕಿತ್ಸೆ ನಡೆಸುವುದಕ್ಕೆ ತಮ್ಮ ವಿರೋಧ ಇರುವುದಾಗಿ ಕರವೇ ಹೇಳಿದೆ.

ಶಸ್ತ್ರ ಚಿಕಿತ್ಸೆಗೆ ಬರುವವರಿಗೆ ಸಂಧ್ಯಾ ಸುರಕ್ಷಾ ಕಾರ್ಡ್ ಇರಬೇಕು ಎಂದು ತಿಳಿಸಲಾಗಿದೆ.

ಶನಿವಾರಸಂತೆ ಮತ್ತು ಗೌಡಳ್ಳಿ ಗ್ರಾಮ ಪಂಚಾಯಿತಿ ಯಲ್ಲಿ ಹೆಚ್ಚಾಗಿ ಬಡವರು ಹಾಗೂ ಕೂಲಿ ಕಾರ್ಮಿಕರು ಇದ್ದು, ಇವರಿಗೆಲ್ಲರಿಗೂ ಬಿಪಿಎಲ್ ಕಾರ್ಡ್ ಇದೆ. ಸಂಧ್ಯಾ ಸುರಕ್ಷಾ ಕಾರ್ಡ್ ಇರುವವರು ಕಡಿಮೆ. ಸಂಧ್ಯಾಸುರಕ್ಷಾ ಇಲ್ಲದವರಿಗೆ ಕಡಿಮೆ ದರದಲ್ಲಿ ಆಪರೇಷನ್ ಮಾಡುತ್ತವೆಂದು ಖಾಸಗಿ ಆಸ್ಪತ್ರೆಯವರು ಹಣ ಪೀಕಿಸುತ್ತಾರೆ.ಈಕೆಲಸಕ್ಕೆ ನಮ್ಮ ವಿರೋಧ ಇದೆ. ಹಾಗಾಗಿ ಖಾಸಗಿ ಆಸ್ಪತ್ರೆಗೆ ನೀಡುವುದಕ್ಕೆ ನಮ್ಮ ವಿರೋಧವಿದೆ ಎಂದು ಕರವೇ ಹೇಳಿದೆ.


ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಅಂಧತ್ವ ನಿವಾರಣೆ ಕಾರ್ಯಕ್ರಮಗಳು ತುಂಬಾ ಇದೆ. ಇದನ್ನು ಸದ್ಬಳಕೆ ಮಾಡಿಕೊಂಡು ಬಿಪಿಎಲ್ ಕಾರ್ಡ್ ದಾರರಿಗೆ ಉಚಿತವಾಗಿ ಮಾಡಿಸಿ ಕೊಡಬಹುದಿತ್ತು. ಶನಿವಾರಸಂತೆ ಹಾಗೂ ಗೌಡಳ್ಳಿ ಗ್ರಾಮ ಪಂಚಾಯಿತಿಯಲ್ಲಿರುವ ಬಡ ಮತ್ತು ಕೂಲಿ ಕಾರ್ಮಿಕರಿಗೆ ಬಿಪಿಎಲ್ ಕಾರ್ಡ್ ಮಾತ್ರ ಇರುತ್ತದೆ. ಆದರೆ ಸಂಧ್ಯಾಸುರಕ್ಷಾ ಇರುವವರಿಗೆ ಮಾತ್ರ ಉಚಿತವಾಗಿ ಆಪರೇಶನ್ ಆಗುತ್ತದೆ . ಸಂಧ್ಯಾಸುರಕ್ಷಾ ಇಲ್ಲದೆ ವ್ಯಕ್ತಿಗಳು ಬಂದರೆ ಅವರ ಹತ್ತಿರ ಮಾತನಾಡಿ ಕಡಿಮೆ ದರದಲ್ಲಿ ಆಪರೇಷನ್ ಮಾಡಿಕೊಡುತ್ತೇವೆಂದು ಹಣ ಪೀಕುವ ಕೆಲಸ ಇಲ್ಲಿ ನಡೆದೇ ನಡೆಯುತ್ತದೆ. ಅದಲ್ಲದೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ತುಂಬಾ ಒಳ್ಳೆಯ ವೈದ್ಯರುಗಳಿದ್ದಾರೆ ಹಾಗೂ ಕಣ್ಣಿನ ಆಸ್ಪತ್ರೆ ಹೈಟೆಕ್ ಮಾಡಲಾಗಿದೆ. ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ ಅಲ್ಲಿನ ವೈದ್ಯರುಗಳು ಹಾಗೂ ಸಿಬ್ಬಂದಿಗಳು ರೋಗಿಗಳನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ಹಾಗಾಗಿ ಮಡಿಕೇರಿ ಜಿಲ್ಲಾ  ಸರ್ಕಾರಿ ಆಸ್ಪತ್ರೆಯ ವೈದ್ಯರನ್ನು ಹಾಗೂ  ಸಿಬ್ಬಂದಿಗಳಲ್ಲಿ ಉಚಿತ ಕಣ್ಣಿನ ಶಿಬಿರ ಮಾಡಿಸಿದರೆ ಬಡವರ್ಗದವರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಈ ಯೋಜನೆ ತಲುಪುತ್ತದೆ.

ಅದೆಲ್ಲವನ್ನು ಬಿಟ್ಟು ಸರ್ಕಾರ ಅಧೀನದಲ್ಲಿರುವ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು  ಖಾಸಗಿ ಆಸ್ಪತ್ರೆಯ ಮೊರೆ ಹೋಗಿರುವುದು ಯಾಕೆ ಎಂಬ ಕರವೇ ಪ್ರಶ್ನಿಸಿದೆ.

ಶನಿವಾರಸಂತೆ ಹಾಗೂ ಗೌಡಳ್ಳಿ ಗ್ರಾಮ ಪಂಚಾಯಿತಿ ಶಿಬಿರದಲ್ಲಿ ಬಡವರಿಗೆ ಯಾವುದೇ ಪ್ರಯೋಜನ ಇಲ್ಲ. ಹಾಗಾಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ  ಅವರು ಗ್ರಾಮ ಪಂಚಾಯಿತಿಯವರಿಗೆ ಸರಿಯಾದ ನಿರ್ದೇಶನ ಕೊಡಬೇಕಾಗಿ ಕರವೇ ಮನವಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು