5:56 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಮೈಸೂರು ದಸರಾ ಗಜ ಪಯಣಕ್ಕೆ ಚಾಲನೆ: ವರುಣನ ಸಿಂಚನದೊಂದಿಗೆ ಹೆಜ್ಜೆ ಹಾಕಿದ ಕ್ಯಾಪ್ಟನ್ ಅಭಿಮನ್ಯು ತಂಡ

07/08/2022, 12:58

ರಾಜೇಶ್ವರಿ ರಾವ್ ಹುಣಸೂರು ಮೈಸೂರು

info.reporterkarnataka@gmail.com

ವಿಶ್ವವಿಖ್ಯಾತ ಮೈಸೂರು ದಸರಾಗೆ ಮುನ್ನುಡಿಯಾ ಗಜಪಯಣಕ್ಕೆ ಭಾನುವಾರ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಚಾಲನೆ ನೀಡಲಾಯಿತು.

ವೀರನಹೊಸಹಳ್ಳಿ ಗ್ರಾಮದಲ್ಲಿ ಬೆಳಗ್ಗೆ 9.01ರಿಂದ 9.35ರ ಕನ್ಯಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಪೂಜೆ ಸಲ್ಲಿಸುವುದರ ಮೂಲಕ ಗಜಪಯಣಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಸರಕಾರದ ಪರವಾಗಿ ಚಾಲನೆ ನೀಡಿದರು. 

ಅಭಿಮನ್ಯು, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಚೈತ್ರಾ, ಗೋಪಾಲಸ್ವಾಮಿ, ಕಾವೇರಿ, ಲಕ್ಷ್ಮೀ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಫಲತಾಂಬೂಲ ನೀಡಲಾಯಿತು. ಕಲಾ ತಂಡಗಳು, ಮಂಗಳವಾದ್ಯದೊಂದಿಗೆ ವರುಣನ ಸಿಂಚನದ ನಡುವೆ ಗಜಪಡೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಿದವು.

ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ಗಜಪಯಣಕ್ಕೆ ಇಂದು ವಿಜೃಂಭಣೆಯಿಂದ ಚಾಲನೆ ನೀಡಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ನೇತೃತ್ವದಲ್ಲಿ ಆನೆಗಳನ್ನು ಮೈಸೂರಿಗೆ ಕರೆತರುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಆ.10ರಂದು ಅರಮನೆಗೆ ಗಜ ಪಡೆಯ ಆಗಮನವಾಗಲಿದೆ. ಅಂದು ಬೆಳಗ್ಗೆ 9.20ರಿಂದ 10.00ರ ಕನ್ಯಾ ಲಗ್ನದಲ್ಲಿ ಗಜಪಡೆಯನ್ನು ಬರಮಾಡಿಕೊಳ್ಳಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು