9:54 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸುಲಿಗೆ, ಮನೆ, ವಾಹನ ಕಳ್ಳತನ ಪ್ರಕರಣ: 3 ಮಂದಿ ಆರೋಪಿಗಳ ಬಂಧನ; ಲಕ್ಷಾಂತರ ಮೌಲ್ಯದ ಸೊತ್ತು ವಶ

07/08/2022, 19:26

ಉಡುಪಿ(Reporterkarnataka.com):
ಸುಲಿಗೆ, ಮನೆ ಕಳವು ಹಾಗೂ ವಾಹನ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಬಜ್ಪೆ ಕುರ್ಸುಗುಡ್ಡೆ ನಿವಾಸಿ ಮಹಮ್ಮದ್ ಆರೀಫ್ ಅಲಿಯಾಸ್ ಮುನ್ನ (37), ಮಹಮ್ಮದ್ ಮುನೀರ್ (24) ಮತ್ತು ಅಕ್ಬರ್ (36) ಎಂದು ಗುರುತಿಸಲಾಗಿದೆ.

ವೃದ್ದೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ, ಉಚ್ಚಿಲ ಪಣಿಯೂರು ಹೋಗುವ ದಾರಿಯಲ್ಲಿರುವ ಮನೆಯೊಂದರಿಂದ ರೂಪಾಯಿ 2,52,000/- ಹಣ ಕಳವು, ಪಡುಬಿದ್ರಿ, ಉಚ್ಚಿಲ, ಕಟಪಾಡಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪಡುಬಿದ್ರಿ ಮತ್ತು ಕಾಪು ಠಾಣೆಗಳಲ್ಲಿ ಕಳವು ಪ್ರಕರಣ ದಾಖಲಾಗಿದ್ದವು.

ಕಾಪು ವೃತ್ತ ನಿರೀಕ್ಷಕರ ನೇತೃತ್ವದಲ್ಲಿ‌ ಯಶಸ್ವೀ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡ ಆರೋಪಿಗಳಾದ ಮಹಮ್ಮದ್ ಆರೀಫ್‌ ಅಲಿಯಾಸ್ ಮುನ್ನ, ಮಹಮ್ಮದ್ ಮುನೀರ್ ಮತ್ತು ಅಕ್ಬರ್‌ ಎಂಬವರನ್ನು ಬಂಧಿಸಿ, 2 ½ ಪವನ್ ತೂಕದ ಚಿನ್ನದ ಸರ, ಮೊಬೈಲ್ ಪೋನ್-1, ನಗದು ರೂಪಾಯಿ 61,000/-, ಕಳವು ಮಾಡಿದ 3 ದ್ವಿಚಕ್ರ ವಾಹನ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾ-1, ಮೋಟಾರು ಸೈಕಲ್ -1 ಹಾಗೂ ಇತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ 2,99 ಲಕ್ಷ ರೂ. ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು