ಇತ್ತೀಚಿನ ಸುದ್ದಿ
ಜುಗಾರಿ ಅಡ್ಡೆಯ ಮೇಲೆ ಪೊಲೀಸರ ದಾಳಿ: 7ಮಂದಿಯ ಬಂಧನ, 5950 ರೂ. ನಗದು ವಶ
07/08/2022, 20:50
ಸಾಂದರ್ಭಿಕ ಚಿತ್ರ
ಕುಂದಾಪುರ(reporterkarnataka.com):ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಕುಂದಾಪುರ ಪೊಲೀಸರು 7 ಮಂದಿಯನ್ನು ಬಂಧಿಸಿ, 5950 ರೂ. ಹಣ ವಶಪಡಿಸಿಕೊಂಡ ಘಟನೆ ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ಟಿ.ಟಿ ರೋಡ್ ಬಳಿ ನಡೆದಿದೆ.
ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ವಿಶ್ವನಾಥ, ಗಣೇಶ ದೇವಾಡಿಗ, ರತ್ನಾಕರ, ಬೀರಪ್ಪ ಗೌಡರ್, ದೇವ, ಮಂಜುನಾಥ ಹಾಗೂ ಶ್ರೀಕಾಂತ ಗೌಡರ್ ಎಂದು ಗುರುತಿಸಲಾಗಿದೆ. ಬಂಧಿತರು ಟಿ.ಟಿ ರೋಡ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜುಗಾರಿ ಆಟದಲ್ಲಿ ತೊಡಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿಂದ 5950 ರೂ. ಹಣ ಹಾಗೂ ಇಸ್ಪೀಟು ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














