2:15 PM Sunday23 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಪುದು ಬ್ರಹ್ಮಶ್ರೀ ನಾರಾಯಣ ಗುರು ವೇದಿಕೆಯಿಂದ ಪ್ರತಿಭಾ ಪುರಸ್ಕಾರ

08/08/2022, 16:26

ಬಂಟ್ವಾಳ:(reporterkarnataka.com):ಬಂಟ್ವಾಳ ಪುದು ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರು ವೇದಿಕೆಯ 8ನೇ ವಾರ್ಷಿಕ ಮಹಾ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಆದಿತ್ಯವಾರ ಪುದು ಕುಲಾಲ ಭವನದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಮುಂಡ ಯಾನೆ ಮೋನಪ್ಪ ಪೂಜಾರಿ ಸುಜೀರು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಯಾಗಿ ಕುದ್ರೋಳಿ ಗೋಕರ್ಣನಾಥೇಶ್ವರ
ಕ್ಷೇತ್ರದ ಕೋಶಾಧಿಕಾರಿ ಆರ್. ಪದ್ಮರಾಜ್ ಮಾತನಾಡಿ
ಬಂಟ್ವಾಳ ತಾಲೂಕಿನ ಪುದು ಗ್ರಾಮದ ಬ್ರಹ್ಮಶ್ರೀ ನಾರಾಯಣಗುರು ವೇದಿಕೆಯಿಂದ ನಡೆಯುತ್ತಿರುವ ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಮಾದರಿ. ಈ ವೇದಿಕೆ ಮೂಲಕ ಗ್ರಾಮದಲ್ಲಿರುವ ಸುಮಾರು 350 ಬಿಲ್ಲವ ಕುಟುಂಬಗಳ ಮಾಹಿತಿ ಸಂಗ್ರಹ ಕಾರ್ಯ ನಡೆಸುವ ಮೂಲಕ ಎಲ್ಲರನ್ನೂ ಒಂದುಗೂಡಿಸುವ ಮೂಲ ಹಿರಿಯರ ಜತೆ ಯುವಕರನ್ನು ಮುಖ್ಯವಾಹಿನಿಯತ್ತ ತರಲು ತೊಡಗಿರುವುದು ಶ್ಲಾಘನೀಯ. ವೇದಿಕೆ ಇನ್ನಷ್ಟು ಸಮಾಜಮುಖಿ ಕಾರ್ಯ ನಡೆಸಲು ಈಗಾಗಲೇ ಯೋಜನೆ ರೂಪಿಸದ್ದು, ಈ ಎಲ್ಲ ಉತ್ತಮ ಕಾರ್ಯಗಳಿಗೂ ಬ್ರಹ್ಮಶ್ರೀ ನಾರಾಯಣ ಗುರುಗಳು, ಕುದ್ರೋಳಿ ಶ್ರೀ ಗೋಕರ್ಣನಾಥ ಮತ್ತು ಸಪರಿವಾರ ದೇವರು ಅನುಗ್ರಹ ಕರುಣಿಸಲಿ…ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಉದ್ಯಮಿ ನಾಗೇಶ್ ಕೋಟ್ಯಾನ್, ನಾರಾಯಣ ಗುರು ಯುವ ವೇದಿಕೆ ಮಂಗಳೂರು ಸಲಹಾ ನಿರ್ದೇಶಕ ಎಂ.ಎಸ್. ಕೋಟ್ಯಾನ್, ಕಟ್ಟಡ ನಿರ್ಮಾಣ ಗುತ್ತಿಗೆದಾರ ಕೆ.ಉಮೇಶ ಸುವರ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಜಯಶ್ರೀ ಕೆ.ಎ., ಜಗದೀಶ ಬೊಳ್ಳನೆ,ಗೌರವಾಧ್ಯಕ್ಷ ನಾಗಪ್ಪ ಪೂಜಾರಿ ಕಚೇಲ, ಕೋಶಾಧಿಕಾರಿ ಅಶೋಕ ಹೊಗೆಗದ್ದೆ, ಕಾರ್ಯದರ್ಶಿ ಕಿಶೋರ್ ಸುಜೀರ್, ನೀಲಯ ಅಗರಿ ಮತ್ತಿರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ವೇದಿಕೆ ಅಧ್ಯಕ್ಷ ಬಾಬು ಪೂಜಾರಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು