11:55 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಟಿಶ್ಯೂ ಥ್ರೆಟ್: ಫ್ಲೈಟ್ ನ ಟಿಶ್ಯೂ ಪೇಪರ್ ನಲ್ಲಿ ಬಾಂಬ್ ಬೆದರಿಕೆಯ ಹುಸಿ ಸಂದೇಶ

08/08/2022, 21:01

ಬೆಂಗಳೂರು(reporterkarnataka.com): ವಿಮಾನದ ಟಾಯ್ಲೆಟ್ ಟಿಶ್ಯೂ ಪೇಪರ್ ಮೇಲೆ ಬಾಂಬ್ ಇದೆ ಎಂದು ಬರೆದಿರುವುದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣಕ್ಕೆ ಕಾರಣವಾಯಿತು.

ಬೆಂಗಳೂರಿಗೆ ಜೈಪುರದಿಂದ ಬಂದಿದ್ದ ಇಂಡಿಗೋ ವಿಮಾನ ಭಾನುವಾರ ರಾತ್ರಿ ಇಳಿಯುವ ಮುನ್ನ ವಿಮಾನದಲ್ಲಿ ಬಾಂಬ್ ಇರುವುದಾಗಿ ಟಾಯ್ಲೆಟ್‌ನಲ್ಲಿ ಟಿಶ್ಯೂ ಪೇಪರ್‌ ಮೇಲೆ ಗೀಚಿದ ಸಂದೇಶ ಪತ್ತೆಯಾಗಿತ್ತು. ಇದು ಕೆಲ ಹೊತ್ತು ಅತಂಕಕ್ಕೆ ಕಾರಣವಾಗಿತ್ತು.

ವಿಮಾನದ ಹಿಂಭಾಗದ ಶೌಚಾಲಯದಲ್ಲಿ ಟಿಶ್ಯೂ ಪೇಪರ್‌ ಬಿದ್ದಿದ್ದನ್ನು ಕ್ಯಾಬಿನ್ ಸಿಬ್ಬಂದಿ ಗಮನಿಸಿದ್ದರು. ಇದರಲ್ಲಿ ‘ಲ್ಯಾಂಡ್ ನಾ ಕರ್ನಾ, ಇಸ್ ಫ್ಲೈಟ್‌ ಮೆ ಬಾಂಬ್ ಹೈ’ (ವಿಮಾನವನ್ನು ಇಳಿಸಬೇಡಿ, ಇದರಲ್ಲಿ ಬಾಂಬ್ ಇದೆ) ಎಂದು ಬರೆದಿತ್ತು ಎಂದು ಭದ್ರತಾ ಅಧಿಕಾರಿ ತಿಳಿಸಿದ್ದಾರೆ.

ತಕ್ಷಣ ಕ್ಯಾಪ್ಟನ್, ವಿಮಾನ ನಿಲ್ದಾಣದ ಭದ್ರತಾ ಏಜೆನ್ಸಿಗಳನ್ನು ಸಂಪರ್ಕಿಸಿ, ಅನುಮತಿ ಪಡೆದು ಬಳಿಕ ವಿಮಾನವನ್ನು ಇಳಿಸಿದ್ದಾರೆ. ತನಿಖೆ ಸಂದರ್ಭ ಇದು ಹುಸಿ ಬಾಂಬ್ ಸಂದೇಶ ಎಂಬುದು ಸ್ಪಷ್ಟವಾಗಿದೆ. ಈ ವಿಮಾನದಲ್ಲಿ 175 ಪ್ರಯಾಣಿಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು