3:10 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಟಿಶ್ಯೂ ಥ್ರೆಟ್: ಫ್ಲೈಟ್ ನ ಟಿಶ್ಯೂ ಪೇಪರ್ ನಲ್ಲಿ ಬಾಂಬ್ ಬೆದರಿಕೆಯ ಹುಸಿ ಸಂದೇಶ

08/08/2022, 21:01

ಬೆಂಗಳೂರು(reporterkarnataka.com): ವಿಮಾನದ ಟಾಯ್ಲೆಟ್ ಟಿಶ್ಯೂ ಪೇಪರ್ ಮೇಲೆ ಬಾಂಬ್ ಇದೆ ಎಂದು ಬರೆದಿರುವುದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣಕ್ಕೆ ಕಾರಣವಾಯಿತು.

ಬೆಂಗಳೂರಿಗೆ ಜೈಪುರದಿಂದ ಬಂದಿದ್ದ ಇಂಡಿಗೋ ವಿಮಾನ ಭಾನುವಾರ ರಾತ್ರಿ ಇಳಿಯುವ ಮುನ್ನ ವಿಮಾನದಲ್ಲಿ ಬಾಂಬ್ ಇರುವುದಾಗಿ ಟಾಯ್ಲೆಟ್‌ನಲ್ಲಿ ಟಿಶ್ಯೂ ಪೇಪರ್‌ ಮೇಲೆ ಗೀಚಿದ ಸಂದೇಶ ಪತ್ತೆಯಾಗಿತ್ತು. ಇದು ಕೆಲ ಹೊತ್ತು ಅತಂಕಕ್ಕೆ ಕಾರಣವಾಗಿತ್ತು.

ವಿಮಾನದ ಹಿಂಭಾಗದ ಶೌಚಾಲಯದಲ್ಲಿ ಟಿಶ್ಯೂ ಪೇಪರ್‌ ಬಿದ್ದಿದ್ದನ್ನು ಕ್ಯಾಬಿನ್ ಸಿಬ್ಬಂದಿ ಗಮನಿಸಿದ್ದರು. ಇದರಲ್ಲಿ ‘ಲ್ಯಾಂಡ್ ನಾ ಕರ್ನಾ, ಇಸ್ ಫ್ಲೈಟ್‌ ಮೆ ಬಾಂಬ್ ಹೈ’ (ವಿಮಾನವನ್ನು ಇಳಿಸಬೇಡಿ, ಇದರಲ್ಲಿ ಬಾಂಬ್ ಇದೆ) ಎಂದು ಬರೆದಿತ್ತು ಎಂದು ಭದ್ರತಾ ಅಧಿಕಾರಿ ತಿಳಿಸಿದ್ದಾರೆ.

ತಕ್ಷಣ ಕ್ಯಾಪ್ಟನ್, ವಿಮಾನ ನಿಲ್ದಾಣದ ಭದ್ರತಾ ಏಜೆನ್ಸಿಗಳನ್ನು ಸಂಪರ್ಕಿಸಿ, ಅನುಮತಿ ಪಡೆದು ಬಳಿಕ ವಿಮಾನವನ್ನು ಇಳಿಸಿದ್ದಾರೆ. ತನಿಖೆ ಸಂದರ್ಭ ಇದು ಹುಸಿ ಬಾಂಬ್ ಸಂದೇಶ ಎಂಬುದು ಸ್ಪಷ್ಟವಾಗಿದೆ. ಈ ವಿಮಾನದಲ್ಲಿ 175 ಪ್ರಯಾಣಿಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು