3:17 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಟಿಶ್ಯೂ ಥ್ರೆಟ್: ಫ್ಲೈಟ್ ನ ಟಿಶ್ಯೂ ಪೇಪರ್ ನಲ್ಲಿ ಬಾಂಬ್ ಬೆದರಿಕೆಯ ಹುಸಿ ಸಂದೇಶ

08/08/2022, 21:01

ಬೆಂಗಳೂರು(reporterkarnataka.com): ವಿಮಾನದ ಟಾಯ್ಲೆಟ್ ಟಿಶ್ಯೂ ಪೇಪರ್ ಮೇಲೆ ಬಾಂಬ್ ಇದೆ ಎಂದು ಬರೆದಿರುವುದು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣಕ್ಕೆ ಕಾರಣವಾಯಿತು.

ಬೆಂಗಳೂರಿಗೆ ಜೈಪುರದಿಂದ ಬಂದಿದ್ದ ಇಂಡಿಗೋ ವಿಮಾನ ಭಾನುವಾರ ರಾತ್ರಿ ಇಳಿಯುವ ಮುನ್ನ ವಿಮಾನದಲ್ಲಿ ಬಾಂಬ್ ಇರುವುದಾಗಿ ಟಾಯ್ಲೆಟ್‌ನಲ್ಲಿ ಟಿಶ್ಯೂ ಪೇಪರ್‌ ಮೇಲೆ ಗೀಚಿದ ಸಂದೇಶ ಪತ್ತೆಯಾಗಿತ್ತು. ಇದು ಕೆಲ ಹೊತ್ತು ಅತಂಕಕ್ಕೆ ಕಾರಣವಾಗಿತ್ತು.

ವಿಮಾನದ ಹಿಂಭಾಗದ ಶೌಚಾಲಯದಲ್ಲಿ ಟಿಶ್ಯೂ ಪೇಪರ್‌ ಬಿದ್ದಿದ್ದನ್ನು ಕ್ಯಾಬಿನ್ ಸಿಬ್ಬಂದಿ ಗಮನಿಸಿದ್ದರು. ಇದರಲ್ಲಿ ‘ಲ್ಯಾಂಡ್ ನಾ ಕರ್ನಾ, ಇಸ್ ಫ್ಲೈಟ್‌ ಮೆ ಬಾಂಬ್ ಹೈ’ (ವಿಮಾನವನ್ನು ಇಳಿಸಬೇಡಿ, ಇದರಲ್ಲಿ ಬಾಂಬ್ ಇದೆ) ಎಂದು ಬರೆದಿತ್ತು ಎಂದು ಭದ್ರತಾ ಅಧಿಕಾರಿ ತಿಳಿಸಿದ್ದಾರೆ.

ತಕ್ಷಣ ಕ್ಯಾಪ್ಟನ್, ವಿಮಾನ ನಿಲ್ದಾಣದ ಭದ್ರತಾ ಏಜೆನ್ಸಿಗಳನ್ನು ಸಂಪರ್ಕಿಸಿ, ಅನುಮತಿ ಪಡೆದು ಬಳಿಕ ವಿಮಾನವನ್ನು ಇಳಿಸಿದ್ದಾರೆ. ತನಿಖೆ ಸಂದರ್ಭ ಇದು ಹುಸಿ ಬಾಂಬ್ ಸಂದೇಶ ಎಂಬುದು ಸ್ಪಷ್ಟವಾಗಿದೆ. ಈ ವಿಮಾನದಲ್ಲಿ 175 ಪ್ರಯಾಣಿಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು