12:08 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಮಹಿಳೆಗೆ ಅವಮಾನ: ಬಿಜೆಪಿ ಮುಖಂಡನ ಫ್ಲಾಟ್‌ನ ಹೊರಗಿನ ಅಕ್ರಮ ಕಟ್ಟಡ ಮೇಲೆ ಬುಲ್ಡೋಜರ್ ಕಾರ್ಯಾಚರಣೆ

08/08/2022, 21:06

ನೋಯ್ಡಾ( reporterkarnataka.com):ಮಹಿಳೆಯೊಬ್ಬರ ಜತೆ ಗಲಾಟೆ ಮಾಡಿ ಅವಾಚ್ಯ ಪದ ಬಳಸಿದ ಬಿಜೆಪಿ ಮುಖಂಡರೊಬ್ಬರ ನೋಯ್ಡಾ ಫ್ಲಾಟ್‌ನ ಹೊರಗಿನ ಅಕ್ರಮ ಕಟ್ಟಡಗಳನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರ ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ಕಿತ್ತು ಹಾಕಿದೆ.

ಬಿಜೆಪಿ ಕಿಸಾನ್ ಮೋರ್ಚಾದ ಮುಖಂಡ ಶ್ರೀಕಾಂತ್ ತ್ಯಾಗಿ ಮಹಿಳೆಯೊಂದಿಗೆ ಗಲಾಟೆ ಮಾಡಿದ್ದಲ್ಲದೆ ಕೀಳುಮಟ್ಟದಲ್ಲಿ ವರ್ತಿಸಿದ್ದಾರೆ. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಯೋಗಿ ಸರ್ಕಾರದ ಬುಲ್ಡೋಜರ್ ಕಾರ್ಯರೂಪಕ್ಕಿಳಿದಿದೆ. ನೋಯ್ಡಾದ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯ ಸೆಕ್ಟರ್-93Bಯಲ್ಲಿರುವ ತ್ಯಾಗಿಗೆ ಸೇರಿದ ಅಕ್ರಮ ಕಟ್ಟಡವನ್ನು ಅಧಿಕಾರಿಗಳು ಹಾಗೂ ಪೊಲೀಸರು ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದ್ದಾರೆ. ಕಾರ್ಯಾಚರಣೆಗೆ ಅಡ್ಡಿಪಡಿಸಿದ ತ್ಯಾಗಿ ಬೆಂಬಲಿಗರನ್ನು ಪೊಲೀಸರು ಚದುರಿಸಿದ್ದಲ್ಲದೆ, ತ್ಯಾಗಿ ವಿರುದ್ಧ ಗ್ಯಾಂಗ್‌ಸ್ಟರ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕೆಲವು ದಿನಗಳ ಹಿಂದೆ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಯಲ್ಲಿ ಮಹಿಳೆ ಮತ್ತು ತ್ಯಾಗಿ ನಡುವೆ ಜಗಳವಾಗಿತ್ತು. ತ್ಯಾಗಿ ಸಸಿಗಳನ್ನು ನೆಡುವ ಸಂದರ್ಭದಲ್ಲಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಮಹಿಳೆ ಪ್ರತಿಭಟಿಸಿದರು. ಈ ವೇಳೆ ತನಗೆ ಏನು ಬೇಕಾದರೂ ಮಾಡುವ ಹಕ್ಕಿದೆ ಎಂದು ವಾದ ಮಾಡುತ್ತಾ ಮಹಿಳೆಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ನಡೆಸಲಾಗಿತ್ತು.

ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯ ಎಂದು ಹೇಳಿಕೊಂಡರೂ ಪಕ್ಷ ಹಿಂದೆ ಸರಿಯದೆ ಆತನ ವಿರುದ್ಧ ಕ್ರಮ ಕೈಗೊಂಡಿದೆ. ಅಧಿಕಾರ ದುರುಪಯೋಗ ಪಡಿಸಿಕೊಂಡ ಶ್ರೀಕಾಂತ್ ತ್ಯಾಗಿ ವಿರುದ್ಧ ಕೈಗೊಂಡ ಕ್ರಮಗಳಿಗಾಗಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ, ಬಿಜೆಪಿಯ ದೆಹಲಿ ವಕ್ತಾರ ಖೇಮಚಂದ್ ಶರ್ಮಾ ಧನ್ಯವಾದ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು