10:06 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಅನ್ ಲಾಕ್: ಮಕ್ಕಳ ಜತೆ ಮಂಗಳೂರು ಸುತ್ತಿದ ಹೆತ್ತವರು: ಮಧ್ಯಾಹ್ನ 2.45 ಕಳೆದರೂ ತೆರವಾಗದ ಜನರು!!

23/06/2021, 16:35

ಚಿತ್ರ :ಅನುಷ್ ಪಂಡಿತ್ ಮಂಗಳೂರು

strong>ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ 2 ಗಂಟೆ ವರೆಗೆ ಅನ್ ಲಾಕ್ ಜಾರಿಯಲ್ಲಿರುವುದರಿಂದ ಮಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಳಗೊಂಡಿದ್ದು, ನಗರಕ್ಕೆ ಆಗಮಿಸಿದವರಲ್ಲಿ ಹೆಚ್ಚಿನವರು ಜತೆಗೆ ಮಕ್ಕಳನ್ನು ಕೂಡ ಕರೆದು ತಂದಿರುವುದು ಹಲವೆಡೆ ಕಂಡು ಬಂತು. ಈ ನಡುವೆ ಮಂಗಳೂರು ನಗರದಲ್ಲಿ ಪೊಲೀಸ್ ತಪಾಸಣೆ ತೀವ್ರಗೊಂಡಿದೆ. 


ಕೊರೊನಾ 3ನೇ ಅಲೆಯ ಭೀತಿಯಿದ್ದರೂ, ಮಕ್ಕಳನ್ನು ಸುರಕ್ಷಿತವಾಗಿ ಮನೆಯಲ್ಲಿ ಇರಿಸಿಕೊಳ್ಳುವ ಬಗ್ಗೆ ಜಿಲ್ಲಾಡಳಿತ ಪದೇ ಪದೇ ವಿನಂತಿ ಮಾಡಿದರೂ ನಗರಕ್ಕೆ ಆಗಮಿಸಿದ ಹೆಚ್ಚಿನ ಪೋಷಕರ ಜತೆ 18 ವರ್ಷ ಕೆಳಗಿನ ಮಕ್ಕಳಿದ್ದರು.

ಮಧ್ಯಾಹ್ನ 2 ಗಂಟೆ ವರೆಗೆ ಅಂಗಡಿ ಮುಂಗಟ್ಟು ತೆರೆಯಲು ಹಾಗೂ ಸಾರ್ವಜನಿಕರಿಗೆ ಖರೀದಿಗೆ ಅವಕಾಶ ನೀಡಲಾಗಿತ್ತು.

ಆದರೆ ಮಧ್ಯಾಹ್ನ 2.45ರ ವರೆಗೆ ಕೂಡ ಕೆಲವು ಕಡೆಗಳಲ್ಲಿ ಜನರು ರಸ್ತೆಯಿಂದ, ಅಂಗಡಿ ಬಾಗಿಲಿನಿಂದ ತೆರವುಗೊಂಡಿರಲಿಲ್ಲ.

ಮಾಸ್ಕ್ ಧರಿಸದೆ ಓಡಾಡುವವರಿಗೆ ಮತ್ತು ಅನಗತ್ಯ ಸತ್ತಾಟಕ್ಕೆ ಬಂದವರಿಗೆ ಪೊಲೀಸರು ದಂಡ ವಿಧಿಸಿ ಎಚ್ಚರಿಕೆ ನೀಡಿ ಕಳುಹಿಸುತ್ತಿದ್ದರು. ಸಂಶಯಾಸ್ಪದ ವಾಹನಗಳನ್ನು ನಿಲ್ಲಿಸಿ ಆರ್ ಸಿ, ಡಿಎಲ್, ಇನ್ಸೂರೆನ್ಸ್ ತಪಾಸಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು