7:55 AM Friday19 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ಮೂಡಿಗೆರೆ: ಮನೆ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರ ದಾರುಣ ಸಾವು; ಕಾಫಿನಾಡಿನಲ್ಲಿ ಮುಂದುವರಿದ ಮಳೆ ಅಬ್ಬರ

10/08/2022, 09:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಕೆ ತಲಗೂರು ಎಂಬಲ್ಲಿ ಮನೆ ಮೇಲೆ ಬೃಹತಾಕಾರದ ಮರ ಒಂದು ಬಿದ್ದು ಮನೆಯಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. 

ರಾತ್ರಿ ಸುಮಾರು10.00 ಗಂಟೆಯ ಸಮಯದಲ್ಲಿ ಕೆ. ತಲಗೂರು ಗ್ರಾಮದ ಚಂದ್ರಮ್ಮ ಅವರ ಮನೆಯಲ್ಲಿ ಚಂದ್ರಮ್ಮ ಮತ್ತು ಸರಿತಾ ಹಾಗೂ ಸರಿತಾ  ಅವರ ಮಕ್ಕಳಾದ ಸುನಿಲ್ ಹಾಗೂ ದೀಕ್ಷಿತ್  ಅವರು ಮಲಗಿದ್ದಾಗ ಮನೆಯ ಪಕ್ಕದಲ್ಲಿ ಇದ್ದ ಬೃಹದಾಕಾರದ ಮರ ಚಂದ್ರಮ್ಮ ಅವರ ಮನೆಯ ಮೇಲೆ ಬಿದ್ದು  ಮನೆಯೊಳಗೆ ಮಲಗಿದ್ದ ಸರಿತಾ
ಅವರು ಸ್ಥಳದಲ್ಲಿ ಮೃತಪಟ್ಟಿದ್ದು, ಚಂದ್ರಮ್ಮ ರವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮದ್ಯೆ ಮೃತಪಟ್ಟಿದ್ದಾರೆ. ಮೃತರಾದ ಸರಿತಾ ಮತ್ತು ಚಂದ್ರಮ್ಮ ರವರು ಸಂಬಂಧಿಕರಾಗಿದ್ದು, ಅಕ್ಕಪಕ್ಕದ ಮನೆಯವರಾಗಿದ್ದಾರೆ.


ಕಳೆದ ಒಂದು ವಾರದಿಂದ ಮೂಡಿಗೆರೆ ಮತ್ತು ಕಳಸ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಮತ್ತು ಗಾಳಿ ಬೀಸುತ್ತಿದ್ದು ಗಾಳಿ ಮಳೆಗೆ ಮರ ಬಿದ್ದು ಈ ಅನಾಹುತ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು