3:48 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮೂಡಿಗೆರೆ: ಮನೆ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರ ದಾರುಣ ಸಾವು; ಕಾಫಿನಾಡಿನಲ್ಲಿ ಮುಂದುವರಿದ ಮಳೆ ಅಬ್ಬರ

10/08/2022, 09:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಕೆ ತಲಗೂರು ಎಂಬಲ್ಲಿ ಮನೆ ಮೇಲೆ ಬೃಹತಾಕಾರದ ಮರ ಒಂದು ಬಿದ್ದು ಮನೆಯಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. 

ರಾತ್ರಿ ಸುಮಾರು10.00 ಗಂಟೆಯ ಸಮಯದಲ್ಲಿ ಕೆ. ತಲಗೂರು ಗ್ರಾಮದ ಚಂದ್ರಮ್ಮ ಅವರ ಮನೆಯಲ್ಲಿ ಚಂದ್ರಮ್ಮ ಮತ್ತು ಸರಿತಾ ಹಾಗೂ ಸರಿತಾ  ಅವರ ಮಕ್ಕಳಾದ ಸುನಿಲ್ ಹಾಗೂ ದೀಕ್ಷಿತ್  ಅವರು ಮಲಗಿದ್ದಾಗ ಮನೆಯ ಪಕ್ಕದಲ್ಲಿ ಇದ್ದ ಬೃಹದಾಕಾರದ ಮರ ಚಂದ್ರಮ್ಮ ಅವರ ಮನೆಯ ಮೇಲೆ ಬಿದ್ದು  ಮನೆಯೊಳಗೆ ಮಲಗಿದ್ದ ಸರಿತಾ
ಅವರು ಸ್ಥಳದಲ್ಲಿ ಮೃತಪಟ್ಟಿದ್ದು, ಚಂದ್ರಮ್ಮ ರವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮದ್ಯೆ ಮೃತಪಟ್ಟಿದ್ದಾರೆ. ಮೃತರಾದ ಸರಿತಾ ಮತ್ತು ಚಂದ್ರಮ್ಮ ರವರು ಸಂಬಂಧಿಕರಾಗಿದ್ದು, ಅಕ್ಕಪಕ್ಕದ ಮನೆಯವರಾಗಿದ್ದಾರೆ.


ಕಳೆದ ಒಂದು ವಾರದಿಂದ ಮೂಡಿಗೆರೆ ಮತ್ತು ಕಳಸ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಮತ್ತು ಗಾಳಿ ಬೀಸುತ್ತಿದ್ದು ಗಾಳಿ ಮಳೆಗೆ ಮರ ಬಿದ್ದು ಈ ಅನಾಹುತ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು