11:05 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಕಾಲ್ತೋಡು: ಕಾಲು ಸಂಕದಿಂದ ಆಯತಪ್ಪಿ ಬಿದ್ದು ನೀರು ಪಾಲಾಗಿದ್ದ ಶಾಲಾ ಬಾಲಕಿಯ ಮೃತದೇಹ ಪತ್ತೆ

10/08/2022, 20:12

ಬೈಂದೂರು(reporterkarnataka.com): ಶಾಲೆಯಿಂದ ಮನೆಗೆ ವಾಪಸಾಗುತ್ತಿದ್ದ

ವೇಳೆ ಕಾಲುಸಂಕದಿಂದ ನೀರಿಗೆ ಬಿದ್ದು  ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಸನ್ನಿಧಿ(7) ಮೃತದೇಹ ಘಟನೆ ನಡೆದು 48 ತಾಸಿನ ಬಳಿಕ ಪತ್ತೆಯಾಗಿದೆ.

ಕಾಲ್ತೋಡು ಗ್ರಾಮದ ಮಕ್ಕಿಮನೆ ನಿವಾಸಿ 2ನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿಯ ಮೃತದೇಹ ಬುಧವಾರ ಸಂಜೆ ದುರ್ಘಟನೆ ನಡೆದ ಸ್ಥಳದಿಂದ 400 ಮೀಟರ್ ಅಂತರದಲ್ಲಿ  ಪತ್ತೆಯಾಗಿದೆ.

ಸೋಮವಾರ ಸಂಜೆ ಶಾಲೆಯಿಂದ ಮನೆಗೆ ವಾಪಸಾಗುತ್ತಿದ್ದ ಬಾಲಕಿ ಕಾಲು ಸೇತುವೆಯಲ್ಲಿ ಆಯತಪ್ಪಿ ನೀರಿಗೆ ಬಿದ್ದಿದ್ದಳು. ಘಟನೆ ನಡೆದ ಬಳಿಕ ಬಾಲಕಿಯ ಪತ್ತೆಗಾಗಿ ನಿರಂತರ ಶೋಧ ಕಾರ್ಯ ನಡೆದಿತ್ತು. ಇದೀಗ ಬುಧವಾರ ಸಂಜೆ ಅಗ್ನಿಶಾಮಕ ದಳ ಸಿಬ್ಬಂದಿ, ಈಜುಪಟುಗಳಾದ ಮೀನುಗಾರ ನರೇಶ್ ಕೊಡೇರಿಯವರ ಮುಂದಾಳತ್ವದ 22 ಜನರ ತಂಡ, ಸಾರ್ವಜನಿಕರೂ ಸೇರಿ ನೂರಕ್ಕೂ ಅಧಿಕ ಮಂದಿ ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಕಾರ್ಯಾಚರಣೆಗೆ ಎರಡು ದೋಣಿ ಗಳನ್ನು ಬಳಿಸಿಕೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು