2:27 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಕೇರಳ ಸರಕಾರ ಹಾಗೂ ರಾಜ್ಯಪಾಲರ ನಡುವೆ ಶೀತಲ ಸಮರ: 11 ಸುಗ್ರೀವಾಜ್ಞೆಗಳಿಗೆ ಸಹಿ ಹಾಕದೆ ವಾಪಸ್

11/08/2022, 10:46

ತಿರುವನಂತಪುರ(reporterkarnataka.com);ಕೇರಳ ರಾಜ್ಯಪಾಲರು 11 ಸುಗ್ರೀವಾಜ್ಞೆಗಳಿಗೆ ಸಹಿ ಹಾಕದೆ ವಾಪಸ್ ಕಳುಹಿಸುವುದರೊಂದಿಗೆ ಕೇರಳದಲ್ಲಿ ಸರಕಾರ ಮತ್ತು ರಾಜ್ಯಪಾಲ ಆರೀಫ್​ ಮೊಹಮ್ಮದ್​ ಖಾನ್​ ನಡುವೆ ಶೀತಲ ಸಮರ ಮುಂದುವರಿದಿದೆ. ಇದರೊಂದಿಗೆ ವಿಶೇಷ ಅಧಿವೇಶನಕ್ಕೆ ಕೇರಳ ಸರಕಾರ ಮೊರೆ ಹೋಗಿದೆ.

ರಾಜ್ಯಪಾಲರ ಅಂಕಿತ ಸಿಗದ ಹಿನ್ನೆಲೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಇವುಗಳನ್ನು ಪಾಸ್​ ಮಾಡಿಕೊಳ್ಳಲೆಂದೇ​ ವಿಶೇಷ ಅಧಿವೇಶನ ಕರೆದಿದೆ.

ಎರಡು ದಿನಗಳ ಹಿಂದೆ ರಾಜ್ಯಪಾಲರ ಅಂಕಿತಕ್ಕಾಗಿ ಸರ್ಕಾರ ಸುಗ್ರೀವಾಜ್ಞೆಗಳನ್ನು ಕಳುಹಿಸಲಾಗಿತ್ತು. ಆದರೆ, ರಾಜ್ಯಪಾಲ ಯಾವುದೇ ದಾಖಲೆಗಳನ್ನು ಓದದೆ ಸಹಿ ಹಾಕಲು ನಿರಾಕರಿಸಿದ್ದರು. ಹೀಗಾಗಿಯೇ ಮರು ಪ್ರಕಟಣೆಯಾಗಬೇಕಿದ್ದ ಸುಗ್ರೀವಾಜ್ಞೆಗಳು ರದ್ದಾಗಿವೆ.

ಇದೀಗ ರಾಜ್ಯಪಾಲರಿಗೆ ಸೆಡ್ಡು ಹೊಡೆದಿರುವ ಪಿಣರಾಯಿ ಸರ್ಕಾರ ಸಚಿವ ಸಂಪುಟ ಸಭೆ ಕರೆದು, 10 ದಿನಗಳ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲಿ ಮಸೂದೆಗಳನ್ನು ಮಂಡಿಸಿ ಸದನದಲ್ಲೇ ಅಂಗೀಕಾರ ಪಡೆಯುವ ಉದ್ದೇಶ ಸರ್ಕಾರದ್ದು. 140 ಸದಸ್ಯ ಬಲದ ವಿಧಾನಸಭೆಯಲ್ಲಿ 99 ಸದಸ್ಯರು ಆಡಳಿತಾರೂಢ ಎಡಪಕ್ಷಗಳಿಗೆ ಸೇರಿದ್ದು, ಈ ಎಲ್ಲ ಮಸೂದೆಗಳು ಕ್ಷಣಾರ್ಧದಲ್ಲಿ ಅಂಗೀಕಾರಗೊಳ್ಳುವ ನಿರೀಕ್ಷೆ ಇದೆ.

ಇತ್ತ, ಅಧಿವೇಶನ ನಡೆಸುವ ಬಗ್ಗೆ ರಾಜ್ಯಪಾಲರಿಗೆ 14 ದಿನಗಳು ಮುಂಚಿತವಾಗಿ ನೋಟಿಸ್​ ನೀಡಬೇಕು. ಹೀಗಾಗಿಯೇ ಸ್ಪೀಕರ್​ ಜೊತೆ ಚರ್ಚಿಸಿ ಸರ್ಕಾರ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು