5:48 AM Sunday13 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಕೇರಳ ಸರಕಾರ ಹಾಗೂ ರಾಜ್ಯಪಾಲರ ನಡುವೆ ಶೀತಲ ಸಮರ: 11 ಸುಗ್ರೀವಾಜ್ಞೆಗಳಿಗೆ ಸಹಿ ಹಾಕದೆ ವಾಪಸ್

11/08/2022, 10:46

ತಿರುವನಂತಪುರ(reporterkarnataka.com);ಕೇರಳ ರಾಜ್ಯಪಾಲರು 11 ಸುಗ್ರೀವಾಜ್ಞೆಗಳಿಗೆ ಸಹಿ ಹಾಕದೆ ವಾಪಸ್ ಕಳುಹಿಸುವುದರೊಂದಿಗೆ ಕೇರಳದಲ್ಲಿ ಸರಕಾರ ಮತ್ತು ರಾಜ್ಯಪಾಲ ಆರೀಫ್​ ಮೊಹಮ್ಮದ್​ ಖಾನ್​ ನಡುವೆ ಶೀತಲ ಸಮರ ಮುಂದುವರಿದಿದೆ. ಇದರೊಂದಿಗೆ ವಿಶೇಷ ಅಧಿವೇಶನಕ್ಕೆ ಕೇರಳ ಸರಕಾರ ಮೊರೆ ಹೋಗಿದೆ.

ರಾಜ್ಯಪಾಲರ ಅಂಕಿತ ಸಿಗದ ಹಿನ್ನೆಲೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಇವುಗಳನ್ನು ಪಾಸ್​ ಮಾಡಿಕೊಳ್ಳಲೆಂದೇ​ ವಿಶೇಷ ಅಧಿವೇಶನ ಕರೆದಿದೆ.

ಎರಡು ದಿನಗಳ ಹಿಂದೆ ರಾಜ್ಯಪಾಲರ ಅಂಕಿತಕ್ಕಾಗಿ ಸರ್ಕಾರ ಸುಗ್ರೀವಾಜ್ಞೆಗಳನ್ನು ಕಳುಹಿಸಲಾಗಿತ್ತು. ಆದರೆ, ರಾಜ್ಯಪಾಲ ಯಾವುದೇ ದಾಖಲೆಗಳನ್ನು ಓದದೆ ಸಹಿ ಹಾಕಲು ನಿರಾಕರಿಸಿದ್ದರು. ಹೀಗಾಗಿಯೇ ಮರು ಪ್ರಕಟಣೆಯಾಗಬೇಕಿದ್ದ ಸುಗ್ರೀವಾಜ್ಞೆಗಳು ರದ್ದಾಗಿವೆ.

ಇದೀಗ ರಾಜ್ಯಪಾಲರಿಗೆ ಸೆಡ್ಡು ಹೊಡೆದಿರುವ ಪಿಣರಾಯಿ ಸರ್ಕಾರ ಸಚಿವ ಸಂಪುಟ ಸಭೆ ಕರೆದು, 10 ದಿನಗಳ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲಿ ಮಸೂದೆಗಳನ್ನು ಮಂಡಿಸಿ ಸದನದಲ್ಲೇ ಅಂಗೀಕಾರ ಪಡೆಯುವ ಉದ್ದೇಶ ಸರ್ಕಾರದ್ದು. 140 ಸದಸ್ಯ ಬಲದ ವಿಧಾನಸಭೆಯಲ್ಲಿ 99 ಸದಸ್ಯರು ಆಡಳಿತಾರೂಢ ಎಡಪಕ್ಷಗಳಿಗೆ ಸೇರಿದ್ದು, ಈ ಎಲ್ಲ ಮಸೂದೆಗಳು ಕ್ಷಣಾರ್ಧದಲ್ಲಿ ಅಂಗೀಕಾರಗೊಳ್ಳುವ ನಿರೀಕ್ಷೆ ಇದೆ.

ಇತ್ತ, ಅಧಿವೇಶನ ನಡೆಸುವ ಬಗ್ಗೆ ರಾಜ್ಯಪಾಲರಿಗೆ 14 ದಿನಗಳು ಮುಂಚಿತವಾಗಿ ನೋಟಿಸ್​ ನೀಡಬೇಕು. ಹೀಗಾಗಿಯೇ ಸ್ಪೀಕರ್​ ಜೊತೆ ಚರ್ಚಿಸಿ ಸರ್ಕಾರ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು