2:06 PM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಸಿಎಂ ಬದಲಾವಣೆ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದೇನು?

11/08/2022, 10:53

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯ ಮತ್ತೆ ಮುನ್ನಲೆಗೆ ಬರುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಧ್ಯಪ್ರವೇಶಿಸಿದ್ದಾರೆ. ಹಾಗಾದರೆ ಈ ಕುರಿತು ಬಿಎಸ್ ವೈ ಹೇಳಿದ್ದೇನು?

ಮಂತ್ರಾಲಯಕ್ಕೂ ತೆರಳುವ ಮುನ್ನ ಮಾಧ್ಯಮ ಜತೆ ಮಾತನಾಡಿದ ಅವರು, ಬೊಮ್ಮಾಯಿ ಅವರೇ ಸಿಎಂ ಆಗಿ
ಮುಂದುವರಿಯುತ್ತಾರೆ. ಚುನಾವಣೆಗೆ 7-8 ತಿಂಗಳು ಇರುವಾಗ ಬದಲಾವಣೆ ಪ್ರಶ್ನೆ ಬರುವುದಿಲ್ಲ. ಮುಖ್ಯಮಂತ್ರಿ ಗಳಾಗಿ ಬೊಮ್ಮಾಯಿ ಅವ್ರೇ ಮುಂದುವರಿಯುತ್ತಾರೆ ಎಂದರು.

ರಾಜ್ಯದಲ್ಲಿ ಮೂರನೇ ಸಿಎಂ ಬರ್ತಾರೆಂದು ಕಾಂಗ್ರೆಸ್ ಮಾಡಿದ್ದ ಟ್ವೀಟ್ ಸಂಬಂಧ ಮಾತನಾಡಿದ ಅವರು ಸಿಎಂ ಬದಲಾವಣೆ ಕುರಿತ ಚರ್ಚೆಯಲ್ಲಿ ಯಾವುದೇ ಸತ್ಯಾಂಶ ಇಲ್ಲ. 

ಅನಗತ್ಯವಾದ ಚರ್ಚೆ ಸರಿಯಲ್ಲ. ಯಾರೂ ಕೂಡ ಸಿಎಂ ಬದಲಾವಣೆ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯೂ ಇಲ್ಲ. ಕೇಂದ್ರ ಗೃಹ ಸಚಿವ 
ಅಮಿತ್ ಷಾ ನನ್ನ ಬಳಿ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ಮಾಡಿದ್ರು ಅಷ್ಟೇ. ಆದರೆ ನಾಯಕತ್ವದ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಯಾರು ಏನೇ ಹೇಳಿದ್ರು ಆ ರೀತಿಯ ಬದಲಾವಣೆಗಿಳಿಲ್ಲ ಎಂದರು.

ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳುವುದೇ ನಮ್ಮ ಉದ್ದೇಶ. ನಾನು ಈಗಾಗಲೇ ವಿಧಾನಸಭೆ ಯಲ್ಲಿ ಹೇಳಿದ್ದೇನೆ, ಯಾರೋ ಒಂದಿಬ್ಬರು ತಾವು ಮುಂದೆ ಮುಖ್ಯಮಂತ್ರಿ ಆಗ್ತೀವಿ ಅನ್ನೋ ಭ್ರಮೆ ನಲ್ಲಿದ್ದಾರೆ. ಆದರೆ ಅವರಿಗೆ ನಾವು ಅವಕಾಶ ಮಾಡಿಕೊಡುವುದಿಲ್ಲ. ನಿಶ್ಚಿತವಾಗಿ ಬಿಜೆಪಿಯವರೇ ಮುಂದಿನ ಮುಖ್ಯಮಂತ್ರಿಗಳಾಗ್ತಾರೆ. ನಾವೆಲ್ಲರೂ ಸಾಮೂಹಿಕವಾಗಿ ಪ್ರವಾಸ ಮಾಡಿ, ಅಧಿಕಾರಕ್ಕೆ ಬರಲು 135 ಸ್ಥಾನ ಗೆಲ್ತೇವೆ. ನಮಗೆ ಮೋದಿಯಂತ ನಾಯಕ ಇರೋದ್ರಿಂದ ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ವಿಶ್ವಾಸ ನಮಗೆ ಇದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು