2:39 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಸಿಎಂ ಬದಲಾವಣೆ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದೇನು?

11/08/2022, 10:53

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯ ಮತ್ತೆ ಮುನ್ನಲೆಗೆ ಬರುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಧ್ಯಪ್ರವೇಶಿಸಿದ್ದಾರೆ. ಹಾಗಾದರೆ ಈ ಕುರಿತು ಬಿಎಸ್ ವೈ ಹೇಳಿದ್ದೇನು?

ಮಂತ್ರಾಲಯಕ್ಕೂ ತೆರಳುವ ಮುನ್ನ ಮಾಧ್ಯಮ ಜತೆ ಮಾತನಾಡಿದ ಅವರು, ಬೊಮ್ಮಾಯಿ ಅವರೇ ಸಿಎಂ ಆಗಿ
ಮುಂದುವರಿಯುತ್ತಾರೆ. ಚುನಾವಣೆಗೆ 7-8 ತಿಂಗಳು ಇರುವಾಗ ಬದಲಾವಣೆ ಪ್ರಶ್ನೆ ಬರುವುದಿಲ್ಲ. ಮುಖ್ಯಮಂತ್ರಿ ಗಳಾಗಿ ಬೊಮ್ಮಾಯಿ ಅವ್ರೇ ಮುಂದುವರಿಯುತ್ತಾರೆ ಎಂದರು.

ರಾಜ್ಯದಲ್ಲಿ ಮೂರನೇ ಸಿಎಂ ಬರ್ತಾರೆಂದು ಕಾಂಗ್ರೆಸ್ ಮಾಡಿದ್ದ ಟ್ವೀಟ್ ಸಂಬಂಧ ಮಾತನಾಡಿದ ಅವರು ಸಿಎಂ ಬದಲಾವಣೆ ಕುರಿತ ಚರ್ಚೆಯಲ್ಲಿ ಯಾವುದೇ ಸತ್ಯಾಂಶ ಇಲ್ಲ. 

ಅನಗತ್ಯವಾದ ಚರ್ಚೆ ಸರಿಯಲ್ಲ. ಯಾರೂ ಕೂಡ ಸಿಎಂ ಬದಲಾವಣೆ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯೂ ಇಲ್ಲ. ಕೇಂದ್ರ ಗೃಹ ಸಚಿವ 
ಅಮಿತ್ ಷಾ ನನ್ನ ಬಳಿ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ಮಾಡಿದ್ರು ಅಷ್ಟೇ. ಆದರೆ ನಾಯಕತ್ವದ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಯಾರು ಏನೇ ಹೇಳಿದ್ರು ಆ ರೀತಿಯ ಬದಲಾವಣೆಗಿಳಿಲ್ಲ ಎಂದರು.

ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳುವುದೇ ನಮ್ಮ ಉದ್ದೇಶ. ನಾನು ಈಗಾಗಲೇ ವಿಧಾನಸಭೆ ಯಲ್ಲಿ ಹೇಳಿದ್ದೇನೆ, ಯಾರೋ ಒಂದಿಬ್ಬರು ತಾವು ಮುಂದೆ ಮುಖ್ಯಮಂತ್ರಿ ಆಗ್ತೀವಿ ಅನ್ನೋ ಭ್ರಮೆ ನಲ್ಲಿದ್ದಾರೆ. ಆದರೆ ಅವರಿಗೆ ನಾವು ಅವಕಾಶ ಮಾಡಿಕೊಡುವುದಿಲ್ಲ. ನಿಶ್ಚಿತವಾಗಿ ಬಿಜೆಪಿಯವರೇ ಮುಂದಿನ ಮುಖ್ಯಮಂತ್ರಿಗಳಾಗ್ತಾರೆ. ನಾವೆಲ್ಲರೂ ಸಾಮೂಹಿಕವಾಗಿ ಪ್ರವಾಸ ಮಾಡಿ, ಅಧಿಕಾರಕ್ಕೆ ಬರಲು 135 ಸ್ಥಾನ ಗೆಲ್ತೇವೆ. ನಮಗೆ ಮೋದಿಯಂತ ನಾಯಕ ಇರೋದ್ರಿಂದ ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ವಿಶ್ವಾಸ ನಮಗೆ ಇದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು