9:46 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಅಮೃತ ಮಹೋತ್ಸವ: ‘ಕ್ಲಬ್ ಹೌಸ್’ ಇತಿಹಾಸದಲ್ಲೇ ಮೊದಲ ಬಾರಿಗೆ 75 ಗಂಟೆಗಳ ಮ್ಯಾರಥಾನ್ ಕಾರ್ಯಕ್ರಮ!

11/08/2022, 21:14

ಮಂಗಳೂರು(reporterkarnataka.com): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ‘ಕ್ಲಬ್ ಹೌಸ್’ ಇತಿಹಾಸದಲ್ಲೇ ಮೊದಲ ಬಾರಿಗೆ 75 ಗಂಟೆಗಳ ಮ್ಯಾರಥಾನ್ ಕಾರ್ಯಕ್ರಮ!

ಈ 75 ಗಂಟೆಗಳ ನಿರಂತರ ಕಾರ್ಯಕ್ರಮದಲ್ಲಿ ಪ್ರತಿ ಗಂಟೆಗೊಮ್ಮೆ ಒಬ್ಬ ಮಹನೀಯರಂತೆ ಒಟ್ಟು 75 ಅವಿಖ್ಯಾತ(ಇದುವರೆಗೆ ಹೆಚ್ಚು ಪರಿಚಯಿಸಲ್ಪಡದ) ಸ್ವಾತಂತ್ರ್ಯ ಕಲಿಗಳ ಪರಿಚಯ ಹಾಗೂ ಇನ್ನೂ ಅನೇಕ ಅಚ್ಚರಿಗಳು ನಿಮಗಾಗಿ…

ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಉಪನಿಷತ್ತಿನಿಂದ ಹಿಡಿದು ಉಪಗ್ರಹದವರೆಗೆ ಭಾರತದ ಸಾಧನೆಗಳ ಹೆಗ್ಗುರುತುಗಳನ್ನು ಯಥಾಮತಿ,ಯಥಾಸಾಮರ್ಥ್ಯಾ ಸ್ಮರಿಸುವ ಮೂಲಕ ತಾಯಿ ಭಾರತಿಯ ಅಮೃತಪುತ್ರರಾದ ಭಾರತೀಯರಲ್ಲಿ ದೇಶಾಭಿಮಾನದ ಸ್ಫೂರ್ತಿಯ ನಂದಾದೀವಿಗೆಯನ್ನು ಬೆಳಗುವಂತೆ ಮಾಡುವುದೇ ಈ ಕಾರ್ಯಕ್ರಮದ ಪ್ರಮುಖ ಉದ್ದೇಶ.

‘ಭಾರತೀಯ ಕ್ಷಾತ್ರ ಪರಂಪರೆಯ ಮತ್ತು ಸ್ವರಾಜ್ಯ’ ವಿಷಯಗಳೂ ಸೇರಿದಂತೆ ಹಲವು ಸಂವಾದಗಳು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ರಸಪ್ರಶ್ನೆ, ಏಕಪಾತ್ರಾಭಿನಯ, ‘ಈಸೂರು ದಂಗೆ’ ರಂಗನಾಟಕ ವಾಚನ, ‘ಹಲಗಲಿಯ ಬೇಡರು’ ಐತಿಹಾಸಿಕ ನಾಟಕ, ಚರ್ಚೆ, ಉಪನ್ಯಾಸ, ಸೋಬಾನೆ ಪದ, ಭಜನೆ, ದೇಶಭಕ್ತಿ ಗೀತೆಗಳು, ಜಾನಪದ ಗೀತೆಗಳು, ಹಾಸ್ಯ ಗೀತೆಗಳು, ನಾಟಕ, ತಾನಾಜಿ ವಂಶಸ್ಥರಿಂದಲೇ ಛತ್ರಪತಿ ಶಿವಾಜಿ ಮಹಾರಾಜರ ಜೀವನಗಾಥೆ ಕೇಳುವ ಅವಕಾಶ… ಏನುಂಟು, ಏನಿಲ್ಲ!!

ಇವಿಷ್ಟೇ ಅಲ್ಲದೆ, ಭಾರತೀಯ ಕಾಲಮಾನ ರಾತ್ರಿ 12 ಗಂಟೆಯ ನಂತರ ಅನಿವಾಸಿ ಭಾರತೀಯರು ಪಾಲ್ಗೊಂಡು ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು