12:27 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಅಮೃತ ಮಹೋತ್ಸವ: ‘ಕ್ಲಬ್ ಹೌಸ್’ ಇತಿಹಾಸದಲ್ಲೇ ಮೊದಲ ಬಾರಿಗೆ 75 ಗಂಟೆಗಳ ಮ್ಯಾರಥಾನ್ ಕಾರ್ಯಕ್ರಮ!

11/08/2022, 21:14

ಮಂಗಳೂರು(reporterkarnataka.com): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ‘ಕ್ಲಬ್ ಹೌಸ್’ ಇತಿಹಾಸದಲ್ಲೇ ಮೊದಲ ಬಾರಿಗೆ 75 ಗಂಟೆಗಳ ಮ್ಯಾರಥಾನ್ ಕಾರ್ಯಕ್ರಮ!

ಈ 75 ಗಂಟೆಗಳ ನಿರಂತರ ಕಾರ್ಯಕ್ರಮದಲ್ಲಿ ಪ್ರತಿ ಗಂಟೆಗೊಮ್ಮೆ ಒಬ್ಬ ಮಹನೀಯರಂತೆ ಒಟ್ಟು 75 ಅವಿಖ್ಯಾತ(ಇದುವರೆಗೆ ಹೆಚ್ಚು ಪರಿಚಯಿಸಲ್ಪಡದ) ಸ್ವಾತಂತ್ರ್ಯ ಕಲಿಗಳ ಪರಿಚಯ ಹಾಗೂ ಇನ್ನೂ ಅನೇಕ ಅಚ್ಚರಿಗಳು ನಿಮಗಾಗಿ…

ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಉಪನಿಷತ್ತಿನಿಂದ ಹಿಡಿದು ಉಪಗ್ರಹದವರೆಗೆ ಭಾರತದ ಸಾಧನೆಗಳ ಹೆಗ್ಗುರುತುಗಳನ್ನು ಯಥಾಮತಿ,ಯಥಾಸಾಮರ್ಥ್ಯಾ ಸ್ಮರಿಸುವ ಮೂಲಕ ತಾಯಿ ಭಾರತಿಯ ಅಮೃತಪುತ್ರರಾದ ಭಾರತೀಯರಲ್ಲಿ ದೇಶಾಭಿಮಾನದ ಸ್ಫೂರ್ತಿಯ ನಂದಾದೀವಿಗೆಯನ್ನು ಬೆಳಗುವಂತೆ ಮಾಡುವುದೇ ಈ ಕಾರ್ಯಕ್ರಮದ ಪ್ರಮುಖ ಉದ್ದೇಶ.

‘ಭಾರತೀಯ ಕ್ಷಾತ್ರ ಪರಂಪರೆಯ ಮತ್ತು ಸ್ವರಾಜ್ಯ’ ವಿಷಯಗಳೂ ಸೇರಿದಂತೆ ಹಲವು ಸಂವಾದಗಳು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ರಸಪ್ರಶ್ನೆ, ಏಕಪಾತ್ರಾಭಿನಯ, ‘ಈಸೂರು ದಂಗೆ’ ರಂಗನಾಟಕ ವಾಚನ, ‘ಹಲಗಲಿಯ ಬೇಡರು’ ಐತಿಹಾಸಿಕ ನಾಟಕ, ಚರ್ಚೆ, ಉಪನ್ಯಾಸ, ಸೋಬಾನೆ ಪದ, ಭಜನೆ, ದೇಶಭಕ್ತಿ ಗೀತೆಗಳು, ಜಾನಪದ ಗೀತೆಗಳು, ಹಾಸ್ಯ ಗೀತೆಗಳು, ನಾಟಕ, ತಾನಾಜಿ ವಂಶಸ್ಥರಿಂದಲೇ ಛತ್ರಪತಿ ಶಿವಾಜಿ ಮಹಾರಾಜರ ಜೀವನಗಾಥೆ ಕೇಳುವ ಅವಕಾಶ… ಏನುಂಟು, ಏನಿಲ್ಲ!!

ಇವಿಷ್ಟೇ ಅಲ್ಲದೆ, ಭಾರತೀಯ ಕಾಲಮಾನ ರಾತ್ರಿ 12 ಗಂಟೆಯ ನಂತರ ಅನಿವಾಸಿ ಭಾರತೀಯರು ಪಾಲ್ಗೊಂಡು ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು