4:34 AM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಮೂಡುಪಲಿಮಾರು: ಅಪರಿಚಿನ ಮಾತು ನಂಬಿ ಲಕ್ಷಾಂತರ ರೂ. ಮೌಲ್ಯದ ಆಭರಣ ಕಳೆದುಕೊಂಡ ಮಹಿಳೆ

12/08/2022, 21:01

ಪಡುಬಿದ್ರೆ(reporterkarnataka.com);
ಕಾಪು ತಾಲೂಕಿನ ಮೂಡುಫಲಿಮಾರು ಎಂಬಲ್ಲಿ ಅಪರಿಚಿತ ವ್ಯಕ್ತಿಯ ಮಾತಿಗೆ ಮರುಳಾಗಿ ಮಹಿಳೆಯೊಬ್ಬರು ಲಕ್ಷಾಂತರ ರೂ. ಮೌಲ್ಯದ ಆಭರಣ ಕಳೆದುಕೊಂಡ ಘಟನೆ ನಡೆದಿದೆ.

ಮೂಡುಪಲಿಮಾರು ಎಂಬಲ್ಲಿ ಶೋಭಾ ಆಚಾರ್ಯ ಅವರು ತನ್ನ ತಾಯಿ, ಅಕ್ಕ ಮತ್ತು ತಮ್ಮನ ಜೊತೆ ವಾಸವಾಗಿದ್ದು, ಮೇ 6ರಂದು ಅಪರಿಚಿತ ವ್ಯಕ್ತಿಯೋರ್ವ ತನ್ನ ಹೆಸರು ಹರೀಶ್ ಪುತ್ತೂರು ವಿಶ್ವಕರ್ಮ ಕುಲದವರು ಎಂದು ಪರಿಚಯಿಸಿಕೊಂಡು ಬಂದಿದ್ದನು. ಅರ್ಧ ಗಂಟೆ ಮನೆಯಲ್ಲಿ ಇದ್ದು, ನಂತರ ಹೋಗಿದ್ದನು. ಆ ಬಳಿಕ ಎರಡು ದಿನ ಬಿಟ್ಟು ಅದೇ ವ್ಯಕ್ತಿಯು ಮಧ್ಯಾಹ್ನದ ವೇಳೆ ಮತ್ತೆ ಮನೆಗೆ ಬಂದಿದ್ದು, ತನಗೆ ಸೇರಿದ ಕುಂದಾಪುರದಲ್ಲಿದ್ದ 80 ಲಕ್ಷ ರೂ.‌ ಮೌಲ್ಯದ  ಜಾಗವು ಮಾರಾಟವಾಗಿದೆ. ಅದರ ದಾಖಲೆಗಳು ಬ್ಯಾಂಕಿನಲ್ಲಿರುವುದರಿಂದ ಅದನ್ನು ಬಿಡಿಸಿಕೊಳ್ಳಲು ತನಗೆ ಸಹಾಯ ಮಾಡುವಂತೆ ಕೇಳಿಕೊಂಡಿದ್ದಾನೆ. ಈ ವೇಳೆ ಶೋಭಾ ಅವರು ಹಣ ಇಲ್ಲವೆಂದು ತಿಳಿಸಿದ್ದರು. ಆದರೆ ಶೋಭಾ ಹಾಗೂ ಅವರ ಅಕ್ಕ ಶ್ಯಾಮಲಾ ಅವರನ್ನು ನಂಬಿಸಿ 1.65 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪಡೆದುಕೊಂಡು ಹೋಗಿದ್ದನು‌. ಚಿನ್ನದ ಹಣದ ಜೊತೆಗೆ ಜಾಗ ಮಾರಾಟ ಮಾಡಿ ಬಂದಿರುವ ಹಣದಲ್ಲಿ ಹೆಚ್ಚುವರಿಯಾಗಿ ಹಣ ಕೊಡುತ್ತೇನೆ ಎಂದು ನಂಬಿಸಿ ಮೇ16 ರಂದು ಹೋಗಿದ್ದನು. ಬಳಿಕವೂ ಮನೆಗೆ ಬಂದು ಎರಡು ದಿನ ಮನೆಯಲ್ಲಿದ್ದು, ಆ ನಂತರ ಮನೆಯಿಂದ ಹೋದವನು ಈವರೆಗೂ ಬಂದಿಲ್ಲ. ಅಲ್ಲದೆ, ತೆಗೆದುಕೊಂಡು ಹೋದ ಚಿನ್ನಾಭರಣ ನೀಡಿದೆ ವಂಚಿಸಿದ್ದಾರೆ ಎಂದು ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು