3:18 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಇನ್ನು ಮುಂದೆ ಸಾಲ ವಸೂಲಿ ವೇಳೆ ಧಮ್ಕಿ ಹಾಕುವಂತಿಲ್ಲ: ಬ್ಯಾಂಕ್ ಏಜೆಂಟರಿಗೆ ಆರ್ ಬಿಐ ಖಡಕ್ ಸೂಚನೆ

13/08/2022, 11:49

ಮುಂಬೈ(reporterkarnatak.com): ಸಾಲ ವಸೂಲಾತಿ ವೇಳೆ ಬ್ಯಾಂಕಿಂಗ್ ರಿಕವರಿ ಏಜೆಂಟರು ಗ್ರಾಹಕರಿಗೆ ಬೆದರಿಕೆ ಹಾಕುವಂತಿಲ್ಲ ಮತ್ತು ಬೆಳಗ್ಗೆ 8 ಗಂಟೆಗೆ ಮೊದಲು ಮತ್ತು ಸಂಜೆ 7 ಗಂಟೆಯ ನಂತರ ಕರೆ ಮಾಡುವಂತಿಲ್ಲ ಎಂದು ಆರ್ ಬಿಐ ಖಡಕ್ ವಾರ್ನಿಂಗ್ ಕೊಟ್ಟಿದೆ.

ಹಣ ರಿಕವರಿಗಾಗಿ ಏಜೆಂಟರು ಸ್ವೀಕಾರ್ಹವಲ್ಲದ ವರ್ತನೆ ತೋರುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಹೊಸ ಸುತ್ತೋಲೆ ಹೊರಡಿಸಿದ ಆರ್ ಬಿಐ, ಏಜೆಂಟರಿಗೆ ಗ್ರಾಹಕರ ಜೊತೆಗಿನ ವರ್ತನೆ ಬಗ್ಗೆ ಎಚ್ಚರಿಕೆ ನೀಡಿದೆ.

ಸಾಲ ವಸೂಲಿ ಸಂದರ್ಭದಲ್ಲಿ ಸಂಸ್ಥೆಗಳ ಪ್ರತಿನಿಧಿಗಳು ಬಲಪ್ರಯೋಗ, ಕಿರುಕುಳ ನೀಡುವಂಥ ಕ್ರಮಗಳನ್ನು ಅನುಸರಿಸಬಾರದು. ಅನಪೇಕ್ಷಿತ ಮೆಸೇಜ್ ಗಳು, ಅನಾಮಧೇಯರ ಹೆಸರಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮೊದಲು ಮತ್ತು ರಾತ್ರಿ 7 ಗಂಟೆಯ ಬಳಿಕ ಕರೆ ಮಾಡಬಾರದು ಎಂದು ತನ್ನ ಸುತ್ತೋಲೆಯಲ್ಲಿ ಆರ್‌ಬಿಐ ಸೂಚಿಸಿದೆ.

ಗ್ರಾಹಕರ ಜೊತೆಗೆ ರಿಕವರಿ ಏಜೆಂಟರು ಸರಿಯಾಗಿ ನಡೆದುಕೊಳ್ಳಬೇಕು. ಯಾವುದೇ ಗ್ರಾಹಕರ ಜೊತೆಗೆ ಅನುಚಿತ ವರ್ತನೆ ತೋರುವುದು ಸರಿಯಲ್ಲ. ಸರಿಯಾದ ರೀತಿಯಲ್ಲಿ ಸಾಲ ವಸೂಲಾತಿ ಮಾಡಬೇಕು. ನಿಂದಿಸುವುದು ಅಥವಾ ಮಾನಸಿಕ-ದೈಹಿಕ ಕಿರುಕುಳ ನೀಡುವುದು ಕಂಡುಬಂದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೂಗೊಳ್ಳಬೇಕಾಗುತ್ತದೆ ಎಂದು ಕಠಿಣ ಸಂದೇಶ ರವಾನಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು