6:53 PM Monday14 - July 2025
ಬ್ರೇಕಿಂಗ್ ನ್ಯೂಸ್
ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ…

ಇತ್ತೀಚಿನ ಸುದ್ದಿ

ಇನ್ನು ಮುಂದೆ ಸಾಲ ವಸೂಲಿ ವೇಳೆ ಧಮ್ಕಿ ಹಾಕುವಂತಿಲ್ಲ: ಬ್ಯಾಂಕ್ ಏಜೆಂಟರಿಗೆ ಆರ್ ಬಿಐ ಖಡಕ್ ಸೂಚನೆ

13/08/2022, 11:49

ಮುಂಬೈ(reporterkarnatak.com): ಸಾಲ ವಸೂಲಾತಿ ವೇಳೆ ಬ್ಯಾಂಕಿಂಗ್ ರಿಕವರಿ ಏಜೆಂಟರು ಗ್ರಾಹಕರಿಗೆ ಬೆದರಿಕೆ ಹಾಕುವಂತಿಲ್ಲ ಮತ್ತು ಬೆಳಗ್ಗೆ 8 ಗಂಟೆಗೆ ಮೊದಲು ಮತ್ತು ಸಂಜೆ 7 ಗಂಟೆಯ ನಂತರ ಕರೆ ಮಾಡುವಂತಿಲ್ಲ ಎಂದು ಆರ್ ಬಿಐ ಖಡಕ್ ವಾರ್ನಿಂಗ್ ಕೊಟ್ಟಿದೆ.

ಹಣ ರಿಕವರಿಗಾಗಿ ಏಜೆಂಟರು ಸ್ವೀಕಾರ್ಹವಲ್ಲದ ವರ್ತನೆ ತೋರುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಹೊಸ ಸುತ್ತೋಲೆ ಹೊರಡಿಸಿದ ಆರ್ ಬಿಐ, ಏಜೆಂಟರಿಗೆ ಗ್ರಾಹಕರ ಜೊತೆಗಿನ ವರ್ತನೆ ಬಗ್ಗೆ ಎಚ್ಚರಿಕೆ ನೀಡಿದೆ.

ಸಾಲ ವಸೂಲಿ ಸಂದರ್ಭದಲ್ಲಿ ಸಂಸ್ಥೆಗಳ ಪ್ರತಿನಿಧಿಗಳು ಬಲಪ್ರಯೋಗ, ಕಿರುಕುಳ ನೀಡುವಂಥ ಕ್ರಮಗಳನ್ನು ಅನುಸರಿಸಬಾರದು. ಅನಪೇಕ್ಷಿತ ಮೆಸೇಜ್ ಗಳು, ಅನಾಮಧೇಯರ ಹೆಸರಿನಲ್ಲಿ ಬೆಳಗ್ಗೆ 8 ಗಂಟೆಯಿಂದ ಮೊದಲು ಮತ್ತು ರಾತ್ರಿ 7 ಗಂಟೆಯ ಬಳಿಕ ಕರೆ ಮಾಡಬಾರದು ಎಂದು ತನ್ನ ಸುತ್ತೋಲೆಯಲ್ಲಿ ಆರ್‌ಬಿಐ ಸೂಚಿಸಿದೆ.

ಗ್ರಾಹಕರ ಜೊತೆಗೆ ರಿಕವರಿ ಏಜೆಂಟರು ಸರಿಯಾಗಿ ನಡೆದುಕೊಳ್ಳಬೇಕು. ಯಾವುದೇ ಗ್ರಾಹಕರ ಜೊತೆಗೆ ಅನುಚಿತ ವರ್ತನೆ ತೋರುವುದು ಸರಿಯಲ್ಲ. ಸರಿಯಾದ ರೀತಿಯಲ್ಲಿ ಸಾಲ ವಸೂಲಾತಿ ಮಾಡಬೇಕು. ನಿಂದಿಸುವುದು ಅಥವಾ ಮಾನಸಿಕ-ದೈಹಿಕ ಕಿರುಕುಳ ನೀಡುವುದು ಕಂಡುಬಂದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೂಗೊಳ್ಳಬೇಕಾಗುತ್ತದೆ ಎಂದು ಕಠಿಣ ಸಂದೇಶ ರವಾನಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು