11:17 AM Friday3 - May 2024
ಬ್ರೇಕಿಂಗ್ ನ್ಯೂಸ್
ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಇತ್ತೀಚಿನ ಸುದ್ದಿ

ಮೊಬೈಲ್ ಸಂಭಾಷಣೆ ವೇಳೆ ಜಗಳ: ಮದುವೆ  ನಿಶ್ಚಿತಾರ್ಥವಾಗಿದ್ದ ಯುವ ಜೋಡಿ ಆತ್ಮಹತ್ಯೆ

13/08/2022, 18:58

ರಾಯಚೂರು(reporterkarnataka.com): ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವ ಜೋಡಿಯೊಂದು ಕ್ಷುಲ್ಲಕ ಕಾರಣಕ್ಕೆ‌ ಜಗಳವಾಡಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ರಾಯಚೂರಿನಲ್ಲಿ‌ ನಡೆದಿದೆ‌.

ಆತ್ಮಹತ್ಯೆಗೆ ಶರಣಾದವರನ್ನು ಸಿಂಗನೋಡಿ‌ ಗ್ರಾಮದ ಸರಸ್ವತಿ(21) ಹಾಗೂ ಮಂಡಲಗೇರಾ ಗ್ರಾಮದ ವಿನೋದ(24)ಎಂದು ಗುರುತಿಸಲಾಗಿದೆ.

ವಿನೋದ್​​​ ಮತ್ತು ಸರಸ್ವತಿ ಅವರ ಮನೆಯವರೆಲ್ಲ ಸೇರಿ ವಿವಾಹ
ನಿಶ್ಚಿತಾರ್ಥ ಮಾಡಿದ್ದರು. ಬಳಿಕ ಮದುವೆಗೆ ಸಿದ್ಧವಾಗಿದ್ದ ಜೋಡಿ ಮೊಬೈಲ್​ನಲ್ಲಿ ದಿನಾ ಪರಸ್ಪರ ಮಾತನಾಡುತ್ತಿದ್ದರು. ಹಾಗೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಜಗಳವಾಡಿಕೊಂಡಿದ್ದರು. ಇದರಿಂದ ಮನನೊಂದು ಯುವತಿ ಸರಸ್ವತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವಿಷಯ ತಿಳಿದ ಯುವಕ ವಿನೋದ್ ಕೂಡ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ.

ಘಟನಾ ಸ್ಥಳಕ್ಕೆ ಯಾಪಲದಿನ್ನಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು