10:04 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ದ.ಕ. ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್  ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಆಯ್ಕೆ

13/08/2022, 20:58

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಇದರ ವಾರ್ಷಿಕ ಸಾಮಾನ್ಯ ಸಭೆ ನಗರದ ಬೆಂದೂರ್ ನಲ್ಲಿರುವ ಸೆಂಟ್ ಸೆಬೇಂಸ್ಟಿನ್ ಚರ್ಚ್ ಸಭಾಂಗಣದಲ್ಲಿ ಶನಿವಾರ ಜರುಗಿದ್ದು, ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಅವರು ಆಯ್ಕೆಗೊಂಡಿದ್ದಾರೆ.

2022-23 ಮತ್ತು 2023-24 ಅವಧಿಗೆ ನೂತನ ಕಮಿಟಿಯ ಪದಾಧಿಕಾರಿಗಳನ್ನು ಸಹಕಾರಿ ಸಂಘಗಳ ಒಕ್ಕೂಟದ ಸಹಾಯಕ ರಿಜಿಸ್ಟ್ರಾರ್ ಸುಧೀರ್ ಕುಮಾರ್ ಅವರು ಘೋಷಿಸಿದರು.

ಅಧ್ಯಕ್ಷರಾಗಿ ವೇದವ್ಯಾಸ ಕಾಮತ್, ಉಪಾಧ್ಯಕ್ಷರುಗಳಾಗಿ ಅಶೋಕ್ ಪೂವಯ್ಯ ಹಾಗೂ ಶಿವಾನಂದ ಶೆಣೈ, ಕಾರ್ಯದರ್ಶಿಯಾಗಿ ಐವನ್ ಆಲ್ಪ್ರೇಡ್ ಪತ್ರಾವೋ, ಸಹಕಾರ್ಯದರ್ಶಿಗಳಾಗಿ ಗಣೇಶ್ ಪ್ರಸಾದ್ ಕೆ, ಗಣೇಶ್ ಕಾಮತ್, ಕೋಶಾಧಿಕಾರಿಯಾಗಿ ಎ.ಎಸ್ ವೆಂಕಟೇಶ್, ಕಾರ್ಯಕಾರಿಣಿ ಸದಸ್ಯರಾಗಿ ಸುರೇಶ್ ಎಚ್, ರಾಜೇಶ್ ಆಚಾರ್ಯ, ಆರ್.‌ ಶ್ರೀನಿವಾಸ್ ಬಾಳಿಗಾ ಆಯ್ಕೆಯಾಗಿದ್ದಾರೆ.

ಅಶೋಕ್ ಪೂವಯ್ಯ ಸ್ವಾಗತಿಸಿದರು. ಗಣೇಶ್ ಕಾಮತ್ ವಂದಿಸಿದರು.

ಪದಗ್ರಹಣದ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು