9:15 PM Friday9 - May 2025
ಬ್ರೇಕಿಂಗ್ ನ್ಯೂಸ್
Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ…

ಇತ್ತೀಚಿನ ಸುದ್ದಿ

ನಟನೆ, ಗಾಯನ, ನೃತ್ಯದಲ್ಲಿ ಎತ್ತಿದ ಕೈ: ತುಳು ಕುವರಿ 11ರ ಹರೆಯದ ತೀರ್ಥ ಪೊಳಲಿ ಹುಲಿ ಕುಣಿತಕ್ಕೂ ಸೈ!

24/06/2021, 07:24

ಲತಾ ಎ. ಕಲ್ಲಡ್ಕ ಮಂಗಳೂರು

info.reporterkarnataka@gmail.com

ಆಕೆಗಿನ್ನೂ ಬರೇ 11ರ ಹರೆಯ. ಅರಳು ಹುರಿದಂತೆ ಮಾತನಾಡುವ ವಾಕ್ಚತುರ್ಯ. ನಟನೆ, ನೃತ್ಯ, ಗಾಯನ, ಛದ್ಮವೇಷ, ಏಕಪಾತ್ರ ಅಭಿನಯ, ಇಷ್ಟೇ ಅಲ್ಲದೆ ತುಳುನಾಡಿನ ಹೆಮ್ಮೆಯ ಹುಲಿ ಕಣಿತ… ಹೀಗೆ ಎಲ್ಲದರಲ್ಲೂ ಆಕೆ ಸೈ.


ಇವಳು ಬೇರೆ ಯಾರೂ ಅಲ್ಲ, ಮಂಗಳೂರು ಮತ್ತು ಬಂಟ್ವಾಳ ತಾಲೂಕಿಗೆ ಹೊಂದಿಕೊಂಡಿರುವ ಪೊಳಲಿಯ ಅಡ್ಡೂರು ಗ್ರಾಮದ ಪೊನ್ನೆಲದ ಪುತ್ರಿ ತೀರ್ಥ ಪೊಳಲಿ. 

ಈಕೆ ಪೊನ್ನೆಲದ ಕೃಷ್ಣ ಅಮೀನ್ ಹಾಗೂ ಪ್ರೇಮಾ ದಂಪತಿಯ ಮುದ್ದಿನ ಮಗಳು. ಗಂಜಿಮಠದ ರಾಜ್ ಅಕಾಡೆಮಿ ಸ್ಕೂಲ್ ನ 6ನೇ ತರಗತಿ ವಿದ್ಯಾರ್ಥಿನಿ.

‘ಪನೋಡ ಬೊಡ್ಚ’ ತುಳು ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರುವ ಈ ಪುಟ್ಟ ತಾರೆ, ತನ್ನ ಅಭಿನಯದ ಮೂಲಕ ತುಳುವರ ಮನ ಗೆದ್ದಿದ್ದಾಳೆ. ಸರಕಾರಿ ಪ್ರಾಥಮಿಕ ಶಾಲೆ ಕರಂಬಾರ್ ಚಿತ್ರದಲ್ಲಿ ಕೂಡ ನಟಿಸುತ್ತಿದ್ದಾಳೆ. ಯಕ್ಷಗಾನ, ನಾಟಕ, ರೂಪಕ, ಗೀತಗಾಯನ ಎಲ್ಲದರಲ್ಲೂ ತೀರ್ಥ ತನ್ನ ಕೈಚಳಕ ಪ್ರದರ್ಶಿಸುತ್ತಾಳೆ. ಕಾರ್ಯಕ್ರಮಗಳಲ್ಲಿ ಒಳ್ಳೆಯ ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದಾಳೆ. ಹೆಸರಿನ ಮುಂದೆ ವಿಜೆ ಅಂತ ಹಾಕಿಸಿಕೊಳ್ಳಬೇಕೆಂಬ ಆಕೆಯ ಕನಸು ಕೂಡ ನನಸಾಗಿದೆ. ಖಾಸಗಿ ವಾಹಿನಿಯೊಂದರಲ್ಲಿ ‘ವೀಕೆಂಡ್ ವಿತ್ ಮಿ’ ಎಂಬ ಕಾರ್ಯಕ್ರಮವನ್ನು ಕೂಡ ನಡೆಸಿಕೊಡುತ್ತಿದ್ದಳು. ತುಳು ಸಭೆ – ಸಮಾರಂಭವನ್ನು ಚೆನ್ನಾಗಿ ನಿರೂಪಣೆ ಮಾಡುವ ಅದ್ಭುತ ಶಕ್ತಿ ಆಕೆಯಲ್ಲಿದೆ. ಮುಂಬೈಯಲ್ಲಿ ತೀರ್ಥಳ ಕಾರ್ಯಕ್ರಮಕ್ಕೆ ಅಪಾರ ಜನಮನ್ನಣೆ ದೊರೆತಿದೆ.

ಪ್ರತಿಭೆಗೆ ತಕ್ಕಂತೆ ನಾನಾ ಪ್ರಶಸ್ತಿಗಳು ತೀರ್ಥಳನ್ನು ಅರಸಿ ಬಂದಿವೆ.
ಕರ್ನಾಟಕ ಪ್ರತಿಭಾ ರತ್ನ ಪ್ರಶಸ್ತಿ, ತುಳು ಕುವರಿ, ಸೌರಭ ರತ್ನ, ಕೊಂಡಾಟದ ಬಾಲೆ ಮುಂತಾದ ಪ್ರಶಸ್ತಿಗಳು ಬಂದಿವೆ. ಮಂಗಳೂರು ಆಕಾಶವಾಣಿ, ಉಡುಪಿಯ ಸ್ಪಂದನಾ ಟಿವಿ, ನಮ್ಮ ಕುಡ್ಲ ವಾಹಿನಿಯಲ್ಲಿ ಅತಿಥಿ ಕಲಾವಿದೆಯಾಗಿ ಭಾಗವಹಿಸಿದ್ದಾಳೆ. ಬಹುಮುಖ ಪ್ರತಿಭೆಯ ತೀರ್ಥಳಿಗೆ ಈ ಎಲ್ಲ ಸಾಂಸ್ಕೃತಿಕ ಚಟುವಟಿಕೆಗಳ ಜತೆಗೆ ಭವಿಷ್ಯದಲ್ಲಿ ಪೈಲಟ್ ಆಗುವ ಕನಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು