4:44 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ನಟನೆ, ಗಾಯನ, ನೃತ್ಯದಲ್ಲಿ ಎತ್ತಿದ ಕೈ: ತುಳು ಕುವರಿ 11ರ ಹರೆಯದ ತೀರ್ಥ ಪೊಳಲಿ ಹುಲಿ ಕುಣಿತಕ್ಕೂ ಸೈ!

24/06/2021, 07:24

ಲತಾ ಎ. ಕಲ್ಲಡ್ಕ ಮಂಗಳೂರು

info.reporterkarnataka@gmail.com

ಆಕೆಗಿನ್ನೂ ಬರೇ 11ರ ಹರೆಯ. ಅರಳು ಹುರಿದಂತೆ ಮಾತನಾಡುವ ವಾಕ್ಚತುರ್ಯ. ನಟನೆ, ನೃತ್ಯ, ಗಾಯನ, ಛದ್ಮವೇಷ, ಏಕಪಾತ್ರ ಅಭಿನಯ, ಇಷ್ಟೇ ಅಲ್ಲದೆ ತುಳುನಾಡಿನ ಹೆಮ್ಮೆಯ ಹುಲಿ ಕಣಿತ… ಹೀಗೆ ಎಲ್ಲದರಲ್ಲೂ ಆಕೆ ಸೈ.


ಇವಳು ಬೇರೆ ಯಾರೂ ಅಲ್ಲ, ಮಂಗಳೂರು ಮತ್ತು ಬಂಟ್ವಾಳ ತಾಲೂಕಿಗೆ ಹೊಂದಿಕೊಂಡಿರುವ ಪೊಳಲಿಯ ಅಡ್ಡೂರು ಗ್ರಾಮದ ಪೊನ್ನೆಲದ ಪುತ್ರಿ ತೀರ್ಥ ಪೊಳಲಿ. 

ಈಕೆ ಪೊನ್ನೆಲದ ಕೃಷ್ಣ ಅಮೀನ್ ಹಾಗೂ ಪ್ರೇಮಾ ದಂಪತಿಯ ಮುದ್ದಿನ ಮಗಳು. ಗಂಜಿಮಠದ ರಾಜ್ ಅಕಾಡೆಮಿ ಸ್ಕೂಲ್ ನ 6ನೇ ತರಗತಿ ವಿದ್ಯಾರ್ಥಿನಿ.

‘ಪನೋಡ ಬೊಡ್ಚ’ ತುಳು ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರುವ ಈ ಪುಟ್ಟ ತಾರೆ, ತನ್ನ ಅಭಿನಯದ ಮೂಲಕ ತುಳುವರ ಮನ ಗೆದ್ದಿದ್ದಾಳೆ. ಸರಕಾರಿ ಪ್ರಾಥಮಿಕ ಶಾಲೆ ಕರಂಬಾರ್ ಚಿತ್ರದಲ್ಲಿ ಕೂಡ ನಟಿಸುತ್ತಿದ್ದಾಳೆ. ಯಕ್ಷಗಾನ, ನಾಟಕ, ರೂಪಕ, ಗೀತಗಾಯನ ಎಲ್ಲದರಲ್ಲೂ ತೀರ್ಥ ತನ್ನ ಕೈಚಳಕ ಪ್ರದರ್ಶಿಸುತ್ತಾಳೆ. ಕಾರ್ಯಕ್ರಮಗಳಲ್ಲಿ ಒಳ್ಳೆಯ ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದಾಳೆ. ಹೆಸರಿನ ಮುಂದೆ ವಿಜೆ ಅಂತ ಹಾಕಿಸಿಕೊಳ್ಳಬೇಕೆಂಬ ಆಕೆಯ ಕನಸು ಕೂಡ ನನಸಾಗಿದೆ. ಖಾಸಗಿ ವಾಹಿನಿಯೊಂದರಲ್ಲಿ ‘ವೀಕೆಂಡ್ ವಿತ್ ಮಿ’ ಎಂಬ ಕಾರ್ಯಕ್ರಮವನ್ನು ಕೂಡ ನಡೆಸಿಕೊಡುತ್ತಿದ್ದಳು. ತುಳು ಸಭೆ – ಸಮಾರಂಭವನ್ನು ಚೆನ್ನಾಗಿ ನಿರೂಪಣೆ ಮಾಡುವ ಅದ್ಭುತ ಶಕ್ತಿ ಆಕೆಯಲ್ಲಿದೆ. ಮುಂಬೈಯಲ್ಲಿ ತೀರ್ಥಳ ಕಾರ್ಯಕ್ರಮಕ್ಕೆ ಅಪಾರ ಜನಮನ್ನಣೆ ದೊರೆತಿದೆ.

ಪ್ರತಿಭೆಗೆ ತಕ್ಕಂತೆ ನಾನಾ ಪ್ರಶಸ್ತಿಗಳು ತೀರ್ಥಳನ್ನು ಅರಸಿ ಬಂದಿವೆ.
ಕರ್ನಾಟಕ ಪ್ರತಿಭಾ ರತ್ನ ಪ್ರಶಸ್ತಿ, ತುಳು ಕುವರಿ, ಸೌರಭ ರತ್ನ, ಕೊಂಡಾಟದ ಬಾಲೆ ಮುಂತಾದ ಪ್ರಶಸ್ತಿಗಳು ಬಂದಿವೆ. ಮಂಗಳೂರು ಆಕಾಶವಾಣಿ, ಉಡುಪಿಯ ಸ್ಪಂದನಾ ಟಿವಿ, ನಮ್ಮ ಕುಡ್ಲ ವಾಹಿನಿಯಲ್ಲಿ ಅತಿಥಿ ಕಲಾವಿದೆಯಾಗಿ ಭಾಗವಹಿಸಿದ್ದಾಳೆ. ಬಹುಮುಖ ಪ್ರತಿಭೆಯ ತೀರ್ಥಳಿಗೆ ಈ ಎಲ್ಲ ಸಾಂಸ್ಕೃತಿಕ ಚಟುವಟಿಕೆಗಳ ಜತೆಗೆ ಭವಿಷ್ಯದಲ್ಲಿ ಪೈಲಟ್ ಆಗುವ ಕನಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು