1:23 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಶಾಕಿಂಗ್ ನ್ಯೂಸ್: ಮಧ್ಯಾಹ್ನದ ನಿದ್ರೆಗೆ ಭಂಗ; ಪುಟ್ಟ ಕಂದಮ್ಮನ ಕತ್ತು ಹಿಸುಕಿ ಕೊಂದ ಪಾಪಿ ತಂದೆ

14/08/2022, 13:01

ಫರಿದಾಬಾದ್‌(reporterkarnataka.com): ಹರಿಯಾಣದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಧ್ಯಾಹ್ನದ ನಿದ್ದೆಗೆ ಭಂಗ ತಂದಿದೆ ಎಂದು ಕೋಪಗೊಂಡ ಪಾಪಿ ತಂದೆ ಒಂದೂವರೆ ವರ್ಷದ ಮಗುವನ್ನು ಕತ್ತು ಹಿಸುಕಿ ಕೊಂದಿದ್ದಾನೆ.

ಹರಿಯಾಣದ ಫರಿದಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಕೆಲಸ ಮುಗಿಸಿ ಹಿಂತಿರುಗಿದ ವ್ಯಕ್ತಿ ಮಧ್ಯಾಹ್ನ ಮಲಗಿದ್ದಾಗ ಮಗು ಅಳುತ್ತಲೇ ಇತ್ತು.

ಮಗುವಿನ ಅಳುವಿಗೆ ಆಕ್ರೋಶಗೊಂಡ ತಂದೆ ದಿಂಬಿನಿಂದ ಮಗುವಿನ ಕತ್ತು ಹಿಸುಕಿ ಅದರ ಸಾವಿಗೆ ಕಾರಣನಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಎಎನ್‌ಐ ಸುದ್ದಿಸಂಸ್ಥೆಗೆ ಮಾತನಾಡಿದ ಫರಿದಾಬಾದ್ ಸ್ಟೇಷನ್ ಹೌಸ್‌ ಆಫೀಸರ್‌ (ಸ್ಟೇಷನ್ ಹೌಸ್ ಆಫೀಸರ್ ) ದಿನೇಶ್ ಈ ಪ್ರಕರಣವನ್ನು ಖಚಿತಪಡಿಸಿದ್ದಾರೆ ಮತ್ತು ಮಗುವನ್ನು ತನ್ನ ತಂದೆಯೇ ಕೊಂದಿದ್ದಾನೆ ಎಂದು ಹೇಳಿದ್ದಾರೆ.

ಮಗು ಅಳುವುದನ್ನು ಇದ್ದಕ್ಕಿದ್ದಂತೆ ನಿಲ್ಲಿಸಿದ್ದಕ್ಕೆ ನೆರೆಹೊರೆಯವರು ಅನುಮಾನಗೊಂಡು ಆ ವ್ಯಕ್ತಿಯ ಮನೆಗೆ ಹೋಗಿ ನೋಡಿದಾಗ ಮಗುವಿನ ಮೂಗು ಹಾಗೂ ಬಾಯಿಯಿಂದ ರಕ್ತಸ್ರಾವವನ್ನು ಕಂಡುಕೊಂಡರು ಎಂದೂ ಪೊಲೀಸ್‌ ಅಧಿಕಾರಿ ಮಾಹಿತಿ ನೀಡಿದ್ದಾರೆ. ಅಲ್ಲದೆ, ಮಗುವಿನ ಸ್ಥಿತಿಯನ್ನು ಕಂಡ ನೆರೆಹೊರೆಯವರು ಆ ಬಗ್ಗೆ ಆರೋಪಿಯನ್ನು ವಿಚಾರಿಸಿದಾಗ ಆ ಮಗುವಿನ ತಂದೆ ಗಾಬರಿಗೊಂಡು ಓಡಿಹೋಗಿದ್ದಾನೆ. ಆರೋಪಿಯ ಪತ್ನಿ ಹಾಗೂ ಆ ಮಗುವಿನ ಸಹೋದರ ರಕ್ಷಾ ಬಂಧನವನ್ನು ಆಚರಿಸಲು ತನ್ನ ಸಹೋದರನ ಮನೆಯಲ್ಲಿದ್ದಾಗ ಈ ಘಟನೆ ನಡೆದಿದೆ. 

ಆರೋಪಿಯ ಹೆಂಡತಿ ಮತ್ತು ಆ ದಂಪತಿಯ ಮತ್ತೊಂದು ಮಗು ರಕ್ಷಾ ಬಂಧನವನ್ನು ಆಚರಿಸಲು ಮಗುವಿನ ತಾಯಿ ಪ್ರಿಯಾ ಅವರ ಸಹೋದರನ ಮನೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಆರೋಪಿ ತಂದೆಯನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ” ಎಂದು ಸ್ಟೇಷನ್‌ ಹೌಸ್‌ ಆಫೀಸರ್‌ ತಿಳಿಸಿದ್ದಾರೆ.

ಮನೆಗೆ ಹಿಂದಿರುಗಿದ ನಂತರ ಆರೋಪಿಯ ಪತ್ನಿ ಪ್ರಿಯಾ ತನ್ನ ಮಗು ಮೃತಪಟ್ಟಿದ್ದನ್ನು ಮತ್ತು ತನ್ನ ಮಗುವಿನ ಮೂಗು, ಕಿವಿ ಹಾಗೂ ಬಾಯಿಯಿಂದ ರಕ್ತಸ್ರಾವವಾಗುತ್ತಿರುವುದನ್ನು ಕಂಡರು. ಬಳಿಕ, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಮಗುವಿನ ಶವವನ್ನು ಪೋಸ್ಟ್‌ಮಾರ್ಟಂಗೆ ಕಳಿಸಿದ್ದು, ಈ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು