5:46 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಶಾಕಿಂಗ್ ನ್ಯೂಸ್: ಮಧ್ಯಾಹ್ನದ ನಿದ್ರೆಗೆ ಭಂಗ; ಪುಟ್ಟ ಕಂದಮ್ಮನ ಕತ್ತು ಹಿಸುಕಿ ಕೊಂದ ಪಾಪಿ ತಂದೆ

14/08/2022, 13:01

ಫರಿದಾಬಾದ್‌(reporterkarnataka.com): ಹರಿಯಾಣದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಧ್ಯಾಹ್ನದ ನಿದ್ದೆಗೆ ಭಂಗ ತಂದಿದೆ ಎಂದು ಕೋಪಗೊಂಡ ಪಾಪಿ ತಂದೆ ಒಂದೂವರೆ ವರ್ಷದ ಮಗುವನ್ನು ಕತ್ತು ಹಿಸುಕಿ ಕೊಂದಿದ್ದಾನೆ.

ಹರಿಯಾಣದ ಫರಿದಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಕೆಲಸ ಮುಗಿಸಿ ಹಿಂತಿರುಗಿದ ವ್ಯಕ್ತಿ ಮಧ್ಯಾಹ್ನ ಮಲಗಿದ್ದಾಗ ಮಗು ಅಳುತ್ತಲೇ ಇತ್ತು.

ಮಗುವಿನ ಅಳುವಿಗೆ ಆಕ್ರೋಶಗೊಂಡ ತಂದೆ ದಿಂಬಿನಿಂದ ಮಗುವಿನ ಕತ್ತು ಹಿಸುಕಿ ಅದರ ಸಾವಿಗೆ ಕಾರಣನಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಎಎನ್‌ಐ ಸುದ್ದಿಸಂಸ್ಥೆಗೆ ಮಾತನಾಡಿದ ಫರಿದಾಬಾದ್ ಸ್ಟೇಷನ್ ಹೌಸ್‌ ಆಫೀಸರ್‌ (ಸ್ಟೇಷನ್ ಹೌಸ್ ಆಫೀಸರ್ ) ದಿನೇಶ್ ಈ ಪ್ರಕರಣವನ್ನು ಖಚಿತಪಡಿಸಿದ್ದಾರೆ ಮತ್ತು ಮಗುವನ್ನು ತನ್ನ ತಂದೆಯೇ ಕೊಂದಿದ್ದಾನೆ ಎಂದು ಹೇಳಿದ್ದಾರೆ.

ಮಗು ಅಳುವುದನ್ನು ಇದ್ದಕ್ಕಿದ್ದಂತೆ ನಿಲ್ಲಿಸಿದ್ದಕ್ಕೆ ನೆರೆಹೊರೆಯವರು ಅನುಮಾನಗೊಂಡು ಆ ವ್ಯಕ್ತಿಯ ಮನೆಗೆ ಹೋಗಿ ನೋಡಿದಾಗ ಮಗುವಿನ ಮೂಗು ಹಾಗೂ ಬಾಯಿಯಿಂದ ರಕ್ತಸ್ರಾವವನ್ನು ಕಂಡುಕೊಂಡರು ಎಂದೂ ಪೊಲೀಸ್‌ ಅಧಿಕಾರಿ ಮಾಹಿತಿ ನೀಡಿದ್ದಾರೆ. ಅಲ್ಲದೆ, ಮಗುವಿನ ಸ್ಥಿತಿಯನ್ನು ಕಂಡ ನೆರೆಹೊರೆಯವರು ಆ ಬಗ್ಗೆ ಆರೋಪಿಯನ್ನು ವಿಚಾರಿಸಿದಾಗ ಆ ಮಗುವಿನ ತಂದೆ ಗಾಬರಿಗೊಂಡು ಓಡಿಹೋಗಿದ್ದಾನೆ. ಆರೋಪಿಯ ಪತ್ನಿ ಹಾಗೂ ಆ ಮಗುವಿನ ಸಹೋದರ ರಕ್ಷಾ ಬಂಧನವನ್ನು ಆಚರಿಸಲು ತನ್ನ ಸಹೋದರನ ಮನೆಯಲ್ಲಿದ್ದಾಗ ಈ ಘಟನೆ ನಡೆದಿದೆ. 

ಆರೋಪಿಯ ಹೆಂಡತಿ ಮತ್ತು ಆ ದಂಪತಿಯ ಮತ್ತೊಂದು ಮಗು ರಕ್ಷಾ ಬಂಧನವನ್ನು ಆಚರಿಸಲು ಮಗುವಿನ ತಾಯಿ ಪ್ರಿಯಾ ಅವರ ಸಹೋದರನ ಮನೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಆರೋಪಿ ತಂದೆಯನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ” ಎಂದು ಸ್ಟೇಷನ್‌ ಹೌಸ್‌ ಆಫೀಸರ್‌ ತಿಳಿಸಿದ್ದಾರೆ.

ಮನೆಗೆ ಹಿಂದಿರುಗಿದ ನಂತರ ಆರೋಪಿಯ ಪತ್ನಿ ಪ್ರಿಯಾ ತನ್ನ ಮಗು ಮೃತಪಟ್ಟಿದ್ದನ್ನು ಮತ್ತು ತನ್ನ ಮಗುವಿನ ಮೂಗು, ಕಿವಿ ಹಾಗೂ ಬಾಯಿಯಿಂದ ರಕ್ತಸ್ರಾವವಾಗುತ್ತಿರುವುದನ್ನು ಕಂಡರು. ಬಳಿಕ, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಮಗುವಿನ ಶವವನ್ನು ಪೋಸ್ಟ್‌ಮಾರ್ಟಂಗೆ ಕಳಿಸಿದ್ದು, ಈ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು