4:46 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣ:  ಕೆಂಪುಕೋಟೆಯಲ್ಲಿ ಪೊಲೀಸ್ ಭದ್ರತೆ ಹೇಗಿದೆ..?

14/08/2022, 12:39

ಹೊಸದಿಲ್ಲಿ(reporterkarnataka.com)
ದೇಶದ 75ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಕೆಂಪುಕೋಟೆಯಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ.

ಈ ಸಮಾರಂಭದಲ್ಲಿ 7000 ಮಂದಿ ಅತಿಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಇದೇ ವೇಳೆ, 10 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದ್ದು, ಬಹುಹಂತಗಳ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಈ ಬಾರಿ ಮುಖ ಗುರುತಿಸುವ ವ್ಯವಸ್ಥೆ (ಎಫ್‌ಆರ್‌ಎಸ್) ಕ್ಯಾಮರಾಗಳನ್ನು ಕೂಡಾ ಕೆಂಪುಕೋಟೆ ಪ್ರವೇಶಿಸುವ ದ್ವಾರದ ಬಳಿ ಸ್ಥಾಪಿಸಲಾಗಿದೆ. ಪ್ರದೇಶದಲ್ಲಿ ರಾಡಾರ್‌ಗಳನ್ನು ನಿಯೋಜಿಸಲಾಗಿದೆ ಎಂದು ವಿಶೇಷ ಪೊಲೀಸ್ ಆಯುಕ್ತ ದೀಪೇಂದ್ರ ಪಾಠಕ್ ತಿಳಿಸಿದ್ದಾರೆ. 

ನಾವು ಅತ್ಯಂತ ನಿಖರತೆಯ ಭದ್ರತಾ ಕ್ಯಾಮರಾಗಳನ್ನು ಕೆಂಪುಕೋಟೆಯ ಸುತ್ತ ಸ್ಥಾಪಿಸಿದ್ದೇವೆ. ಇದರ ದಿನದ 24 ಗಂಟೆಗಳ ಕಾಲವೂ ನಿಗಾ ಇಟ್ಟಿದ್ದೇವೆ. ಈ ಬಾರಿ ಅತಿಥಿಗಳ ಸಂಖ್ಯೆ 7000 ಕ್ಕೇರಿದೆ. ಪ್ರವೇಶ ದ್ವಾರದಲ್ಲಿ ಎಫ್‌ಆರ್‌ಎಸ್ ಕ್ಯಾಮರಾಗಳನ್ನು ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

*ಏನೆಲ್ಲ ನಿಷೇಧ..?

ಬುತ್ತಿ, ನೀರಿನ ಬಾಟಲಿ, ರಿಮೋಟ್ ಕಂಟ್ರೋಲ್ ಕಾರ್ ಕೀ, ಸಿಗರೇಟ್ ಲೈಟರ್, ಬ್ರೀಫ್‌ಕೇಸು, ಕೈ ಚೀಲ, ಕ್ಯಾಮರಾ, ಬೈನಾಕ್ಯುಲರ್, ಕೊಡೆಗಳು ಮತ್ತು ಇತರ ವಸ್ತುಗಳನ್ನು ಕೆಂಪುಕೋಟೆಯ ಆವರಣದೊಳಗೆ ತರುವುದನ್ನು ನಿಷೇಧಿಸಲಾಗಿದೆ . ಗಾಳಿಪಟ. ಬಲೂನ್, ಚೀನಾ ಲಾಂದ್ರಗಳನ್ನು ಆ.13ರಿಂದ 15ರಂದು ಕಾರ್ಯಕ್ರಮ ಮುಗಿಯುವವರೆಗೆ ಹಾರಿಸುವಂತಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು