12:48 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ವಿಶ್ವ ಟೇಕ್ವಾಂಡೋ ಕೂಟದಲ್ಲಿ ಬೆಳ್ಳಿ ಗೆದ್ದ ಸಂಹಿತಾಗೆ ಹುಟ್ಟೂರಲ್ಲಿ ಸ್ವಾಗತ, ಅಭಿನಂದನೆ

15/08/2022, 15:26

ಮಂಗಳೂರು(reporterkarnataka.com): ಮಲೇಷ್ಯಾ ಕೌಲಲಾಂಪುರದ ವಿಶ್ವ ಟೇಕ್ವಾಂಡೋ ಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಸಂಹಿತಾ ಅಲೆವೂರಾಯ ಅವರನ್ನು ಸೋಮವಾರ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ನಾಗರಿಕರ ಪರವಾಗಿ ಅಭಿನಂದಿಸಲಾಯಿತು. 

ನೇಪಾಳದಲ್ಲಿ  ನಡೆದ ವಿಶ್ವ ಟೇಕ್ವಾಂಡೋ ಕೂಟದಲ್ಲಿ ಚಿನ್ನ ಗಳಿಸಿದ್ದೆ. ಈ ಬಾರಿಯೂ ಚಿನ್ನದ ಪದಕ ನಿರೀಕ್ಷೆಯಲ್ಲಿದ್ದೆ. 20 ದೇಶಗಳ 50 ಸ್ಪರ್ಧಿಗಳು ಇದ್ದರು. ತೀವ್ರವಾದ ಸ್ಪರ್ಧೆ ಇತ್ತು, ಬೆಳ್ಳಿ ಪದಕದಿಂದ ಸಂತುಷ್ಟನಾಗಿದ್ದೇನೆ. ಶಾರದಾ ಕಾಲೇಜು, ಕೋಚ್‌ ಗುರುರಾಜ್‌, ನಿಖಿಲ್‌, ಕೃಷ್ಣ ಮತ್ತು ತಂದೆ ತಾಯಿಯ ಪ್ರೋತ್ಸಾಹದಿಂದ ಪದಕ ಗೆಲ್ಲಲು ಸಾಧ್ಯವಾಯಿತು ಎಂದು ಸಂಹಿತಾ ಅಲೆವೂರಾಯ ಹೇಳಿದರು. 


ಶಿವಳ್ಳಿ ಸ್ಪಂದನ ಅಧ್ಯಕ್ಷ ಕೆ.ಕೃಷ್ಣ ಭಟ್‌, ವಲಯಾಧ್ಯಕ್ಷ ರಾಮಚಂದ್ರ ಭಟ್‌ ಎಲ್ಲೂರು ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಧಾರ್ಮಿಕ ಪರಿಷತ್‌ ಸದಸ್ಯ ಗಿರಿಪ್ರಕಾಶ್‌ ತಂತ್ರಿ ಅಭಿನಂದಿಸಿದರು. ಹೆತ್ತವರಾದ ಕುಂಜತ್ತೋಡಿ ವಾಸುದೇವ ಭಟ್‌ ಮತ್ತು ದೀಪಾ ಕೆ.ಎಸ್.‌ ಮತ್ತು ಋತ್ವಿಕ್‌ ಅಲೆವೂರಾಯ ಇದ್ದರು. 

ಕಾಲೇಜಿನಲ್ಲಿ ಅಭಿನಂದನೆ: ಶಾರದಾ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಮೆರವಣಿಗೆಯಲ್ಲಿ ಕರೆತಂದು ಸನ್ಮಾನಿಸಲಾಯಿತು. ಶಾರದಾ ಕಾಲೇಜಿನ ಮುಖ್ಯಸ್ಥ ಎಂ.ಬಿ.ಪುರಾಣಿಕ್‌, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಯಕ್ಷಧ್ರುವ ಪಟ್ಲ ಫೌಂಡೇಶನ್‌ ಅಧ್ಯಕ್ಷ ಪುರುಷೋತ್ತಮ ಭಂಡಾರಿ ಅಡ್ಯಾರ್‌ ಇದ್ದರು.

ಬಳಿಕ ಕದ್ರಿ ಬಡಾವಣೆಯಲ್ಲಿ ಮಹಿಳಾ ಬಳಗದವರು ಸ್ವಾಗತಿಸಿ, ಪದಕ ಗೆದ್ದು ಊರಿಗೆ ಖ್ಯಾತಿ ತಂದ ಸಂಹಿತಾ ಅಲೆವುರಾಯ ಅವರಿಗೆ ಅಭಿನಂದಿಸಿ, ಜೈಕಾರ ಕೂಗಿದರು. 

ಇತ್ತೀಚಿನ ಸುದ್ದಿ

ಜಾಹೀರಾತು