10:01 PM Monday12 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಕಾವ್ಯವನ್ನು ಅನುಭವಿಸಿ ಬರೆದರೆ ಉತ್ತಮ ಕವನ ಬರುತ್ತೆ: ಪತ್ರಕರ್ತ ರೇಮಂಡ್ ಡಿ.ಕುನ್ಹ ತಾಕೊಡೆ

15/08/2022, 18:57

ಮಂಗಳೂರು(reporterkarnataka.com):ಪ್ರೇರಣಾತ್ಮಕವಾಗಿ ಬರೆಯುವ ಸಾಹಿತಿಗಳು  ನಡು ನಡುವೆ ವಿರಾಮ ತೆಗೆದು ಕೊಂಡು ಅಭ್ಯಸಿಸಿ ಬರೆಯುವ ಹವ್ಯಾಸ ಇಟ್ಟುಕೊಳ್ಳಬೇಕು  ಆ ಮೂಲಕ ಒಂದು ಸೃಜನಾತ್ಮಕ ಸಾಹಿತ್ಯ ರಚಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ರೇಮಂಡ್ ಡಿ.ಕುನ್ಹ ತಾಕೋಡೆ ಹೇಳಿದರು .  

ಅವರು  ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ವತಿಯಿಂದ ನಗರದ ಕದ್ರಿ ಬಾಲಭವನದಲ್ಲಿ ಸ್ವಾತಂತ್ರ್ಯಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ ಭಾರತಾಂಬೆಗೆ ಕನ್ನಡದಾರತಿ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ಈಗ ಸಂಘಟಕರು, ಸಂಶೋಧಕರು ಮತ್ತು ಸಾಹಿತಿಗಳು ಈ ಮೂರು ವರ್ಗದವರಿಂದ ಸಾಹಿತ್ಯ ಸೇವೆ ನಡೀತಿದೆ. ಇದರಲ್ಲಿ ಸಾಹಿತಿಗಳು ಸಂಶೋಧನೆ ಮತ್ತು ಸಂಘಟನೆ ಮಾಡಿದ್ರೆ ಉತ್ತಮ ಸಾಹಿತ್ಯ ಬರುತ್ತದೆ ಎಂದರು.   

ಇದೇ ಸಂದರ್ಭದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಗಝಲ್ ಕವಿ ಹಾಗೂ ಮುಕ್ತಕ ಕವಿ ಎಂದೇ ಜನಪ್ರಿಯರಾದ ಡಾ. ಸುರೇಶ್ ನೆಗಳಗುಳಿ ಅವರನ್ನು ಸನ್ಮಾನಿಸಲಾಯಿತು. 

ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಗುಣಾಜೆ ರಾಮಚಂದ್ರ ಭಟ್ ಮಾತನಾಡಿ, ಕವಿತೆ ಕಟ್ಟುತ್ತಾ ಹೋದಂತೆ ಅದು ಹುಟ್ಟುವುದು, ಕವನವನ್ನು ಮೊದಲ ಬಾರಿಗೆ ಓದಿದಾಗ ಎಲ್ಲಾ ಅರ್ಥವಾಗದೆ ಮರಳಿ ಓದಿಸಬೇಕು.  ಹಾಗೆಂದು ಕವನಗಳು ಅರ್ಥ ಮಾಡಲು ತುಂಬಾ ಕಷ್ಟವಾಗಿರಲೂಬಾರದು.  ಕವಿಗಳು ನಿರಂತರ ಅಧ್ಯಯನ ಮಾಡುತ್ತಿರಬೇಕು ,  ಶಬ್ಧ ಸಂಪತ್ತನ್ನು ಗಳಿಸಿ ಜೀವನಾನುಭವ ಹೊಂದಿರಬೇಕೆಂದು ಹೇಳಿದರು.    

 KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಸ್ವಾಗತಿಸಿ ಪ್ರಾಸ್ತಾವನೆಗೈದರು. NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಹಾಗೂ ಕವಯತ್ರಿ ರೇಖಾ ಸುದೇಶ್ ರಾವ್  ಉಪಸ್ಥಿತರಿದ್ದರು. ರೇಶ್ಮಾ ಶೆಟ್ಟಿ ಗೋರೂರು ನಿರೂಪಿಸಿದರು. ನಂತರ ನಡೆದ ಕವಿಗೋಷ್ಠಿಯಲ್ಲಿ ವಿವಿಧ ಜಿಲ್ಲೆಯ ಸುಮಾರು 30 ಕ್ಕೂ ಹೆಚ್ಚು ಕವಿಗಳು ತಮ್ಮ ಸ್ವರಚಿತ ಕವನ ವಾಚನ ಮಾಡಿದರು.  ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗೀತ ಗಾಯನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು