11:40 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಚಲನಚಿತ್ರ, ಕಿರುತೆರೆ ರಂಗದ ಕಲಾವಿದರಿಗೆ, ಕಾರ್ಮಿಕರಿಗೆ 3 ಸಾವಿರ ರೂ. ಆರ್ಥಿಕ ನೆರವು 

24/06/2021, 07:42

ಮಂಗಳೂರು(reporterkarnataka news) : ಕೋವಿಡ್ -19 ನ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಯಾಗಿದ್ದ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಮತ್ತು ತಂತ್ರಜ್ಞರು ಹಾಗೂ ಚಲನಚಿತ್ರ ಮಂದಿರದ ಕಾರ್ಮಿಕರಿಗೆ ಮುಖ್ಯಮಂತ್ರಿ ಯವರು ಘೋಷಿಸಿದ್ದ ಮೂರು ಸಾವಿರ ರೂ. ಮೊತ್ತದ ವಿಶೇಷ ಆರ್ಥಿಕ ಪ್ಯಾಕೇಜ್ ನೆರವಿಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆನ್ಲೈನ್ ಅರ್ಜಿ ಆಹ್ವಾನಿಸಿದೆ.

ರಾಜ್ಯದಲ್ಲಿ ಎರಡನೇ ಅಲೆಯ ವೇಳೆ ಸರ್ಕಾರ ವಿಧಿಸಿದ್ದ ನಿಬರ್ಂಧದಿಂದಾಗಿ ಬಾಧಿತರಾಗಿದ್ದ ಸಮಾಜ ವಿವಿಧ ವರ್ಗದವರಿಗೆ ಮುಖ್ಯಮಂತ್ರಿ ಯವರು 2021ರ ಜೂನ್ 3 ರಂದು ವಿಶೇಷ ಪರಿಹಾರದ ಎರಡನೇ ಪ್ಯಾಕೇಜ್ ಅನ್ನು ಘೋಷಣೆ ಮಾಡಿದ್ದರು. ಇದರಲ್ಲಿ ಚಲನಚಿತ್ರೋದ್ಯಮ ಹಾಗೂ ಕಿರುತೆರೆ ಮಾಧ್ಯಮದಲ್ಲಿ ತೊಡಗಿಕೊಂಡಿರುವ ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ತಲಾ ಮೂರು ಸಾವಿರ ರೂ. ಪರಿಹಾರ ನೀಡಲು ಸರ್ಕಾರವು ನಿರ್ಧರಿಸಿತ್ತು. 
ಸರ್ಕಾರದ ಈ ನಿರ್ಧಾರದಿಂದಾಗಿ 22, 000 ನೋಂದಾಯಿತ ಕಾರ್ಮಿಕರಿಗೆ ಅನುಕೂಲವಾಗಲಿದೆ. ಇದಕ್ಕಾಗಿ ಅಂದಾಜು ಆರು ಕೋಟಿ ಅರವತ್ತು ಲಕ್ಷ ರೂ. ಮೀಸಲಿರಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಪಿ.ಎಸ್. ಹರ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಲನಚಿತ್ರ ರಂಗದವರು ಮತ್ತು ಕಿರುತೆರೆ ರಂಗದವರಿಗೆ ಆರ್ಥಿಕ ನೆರವನ್ನು ಆಧಾರ್ ಕಾರ್ಡ್ ಸಂಖ್ಯೆಯನ್ನು ಆಧರಿಸಿ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲು ಅನುವಾಗುವಂತೆ ಸೇವಾಸಿಂಧು ವೆಬ್ ಪೋರ್ಟಲ್ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕಾಗಿರುತ್ತದೆ. 

ಒಬ್ಬರಿಗೆ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವವರು ಸಂಬಂಧಿತ ಸಂಘಗಳಲ್ಲಿ ಸದಸ್ಯತ್ವ ಹೊಂದಿರಬೇಕು ಮತ್ತು ಅಲ್ಲಿಂದ ಕಡ್ಡಾಯವಾಗಿ ಶಿಫಾರಸ್ಸು ಪತ್ರ ಪಡೆದು ಅದನ್ನು ಸೇವಾಸಿಂಧು ಪೋರ್ಟಲ್ ನಲ್ಲಿ ಅಪ್ ಡೇಟ್ 

 ಮಾಡಬೇಕಾಗಿದೆ. ಹಾಗೆಯೇ, ಚಲನಚಿತ್ರ ಮಂದಿರಗಳಲ್ಲಿ ಕೆಲಸ ಮಾಡುವವರು ಭವಿಷ್ಯದ ನಿಧಿ (ಪ್ರಾವಿಡೆಂಟ್ ಫಂಡ್) ಸಂಖ್ಯೆಯೊಂದಿಗೆ ಚಲನಚಿತ್ರ ಮಂದಿರದ ಮಾಲೀಕರ ಪತ್ರದೊಂದಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. 

ಇತ್ತೀಚಿನ ಸುದ್ದಿ

ಜಾಹೀರಾತು