9:44 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಕುದ್ರೋಳಿ ದೇಗುಲದಲ್ಲಿ 900 ಕೆಜಿ ಧಾನ್ಯ ಬಳಸಿ ರಚಿಸಿದ ತ್ರಿವರ್ಣ ಧ್ವಜಕ್ಕೆ ಮುಖ್ಯಮಂತ್ರಿ ಮೆಚ್ಚುಗೆ: ಜಿಲ್ಲಾಧಿಕಾರಿ ಶ್ಲಾಘನೆ

15/08/2022, 23:15

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ನಗರದ ಕುದ್ರೋಳಿಯ ಶ್ರೀ ಗೋಕರ್ಣಾನಾಥ ಕ್ಷೇತ್ರದ ಮುಂಭಾಗ ಗುರುಬೆಳದಿಂಗಳು ಸಮಿತಿಯ 30 ಸದಸ್ಯರು ಸೇರಿ 900 ಕೆಜಿ ಧಾನ್ಯಗಳನ್ನು ಬಳಸಿ ರಚಿಸಿದ ತ್ರಿವರ್ಣ ಧ್ವಜದ ಕುರಿತು ಸೋಮವಾರ ದೇಗುಲಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮೆಚ್ಚುಗೆ ವ್ಯಕ್ತಪಡಿಸಿದರು.


ಗುರುಬೆಳದಿಂಗಳು ಸಮಿತಿ ಹಾಗು ದೇಗಲದ ಆಡಳಿತ ಸಮಿತಿಯ ಸದಸ್ಯರ ವಿನೂತನವಾದ ಪ್ರಯತ್ನಕ್ಕೆ ಜಿಲ್ಲಾಧಿಕಾರಿ ಸಂತಸಪಟ್ಟರು.


ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಧಾನ್ಯಗಳಿಂದ ರಚಿಸಲ್ಪಟ್ಟ ಚಿತ್ರಾಕೃತಿ ಕಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.

ಈ ಬಾರಿ 5 ಲಕ್ಷಕ್ಕಿಂತ ಹೆಚ್ಚು ಜನ ತಮ್ಮ ಮನೆ-ಕಚೇರಿಗಳಲ್ಲಿ ತ್ರಿವರ್ಣ ಧ್ವಜ ಹಾರಿಸಿ ದಕ್ಷಿಣ ಕನ್ನಡ ಜನತೆ ದೇಶಾಭಿಮಾನವನ್ನು ತೋರಿಸಿದ್ದಾರೆ. ಎಲ್ಲರಿಗೂ 75ನೇ ಅಮೃತ ಮಹೋತ್ಸವದ ಸ್ವಾತಂತ್ರ್ಯೋತ್ಸವಕ್ಕೆ ಶುಭಾಶಯಗಳು ಎಂದು ಅವರು ನುಡಿದರು.

ಜಿಲ್ಲಾಧಿಕಾರಿಯವರು ಸಾಮಾನ್ಯರಂತೆ  ದೇವರ ದರ್ಶನ ಪಡೆದಿರುವುದು ವಿಶೇಷವಾಗಿತ್ತು.


ಈ ವೇಳೆ ಗುರುಬೆಳದಿಂಗಳು ಫೌಂಡೇಶನ್‌ನ ಅಧ್ಯಕ್ಷ ಹಾಗೂ ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು