8:22 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಶಿವಮೊಗ್ಗ: ಪೊಲೀಸರ ಮೇಲೆ ದಾಳಿಗೆ ಯತ್ನ; ಕಾಲಿಗೆ ಗುಂಡು ಹಾರಿಸಿ ಆರೋಪಿಯ ಬಂಧನ

16/08/2022, 19:02

ಶಿವಮೊಗ್ಗ(reporterkarnataka.com): ಶಿವಮೊಗ್ಗದಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಶಾಲಾ-ಕಾಲೇಜು ಬಂದ್ ಆಗಿದೆ. 144 ಸೆಕ್ಷನ್ ಜಾರಿಯಾಗಿದೆ. ಪೊಲೀಸರು

ತಮ್ಮ ಮೇಲೆ ದಾಳಿ ನಡೆಸಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಸೋಮವಾರ ನಗರದ ಗಾಂಧಿ ಬಜಾರ್‌ನಲ್ಲಿ ಮನೆ ಕಡೆಗೆ ತೆರಳುತ್ತಿದ್ದ ಪ್ರೇಮ್‌ಕುಮಾರ್ ಸಿಂಗ್‌ಗೆ ಚಾಕುವಿನಿಂದ ಇರಿಯಲಾಗಿತ್ತು. ಪ್ರಕರಣದ ಇಬ್ಬರು ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದರು. ಘಟನೆಯ ಪ್ರಮುಖ ಆರೋಪಿ, ಮಾರ್ನಮಿಬೈಲ್ ನಿವಾಸಿ ಮೊಹಮದ್ ಜಬೀ ಅಲಿಯಾಸ್ ಚರ್ಬಿ(30) ಬಂಧಿಸಲು ಮಂಗಳವಾರ ಬೆಳಗ್ಗಿನ ಜಾವ ಪೊಲೀಸರು ಸುತ್ತುವರೆದಿದ್ದರು.

ಎನ್‌ಟಿ ರಸ್ತೆಯ ಫಲಕ್ ಪ್ಯಾಲೇಸ್ ಬಳಿ ಈತನನ್ನು ಸುತ್ತುವರೆದಾಗ ಪೊಲೀಸರ ಮೇಲೆ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ. ತಕ್ಷಣ ವಿನೋಬನಗರ ಠಾಣೆ ಪಿಎಸ್‌ಐ ಮಂಜುನಾಥ ಕುರಿ ತಮ್ಮ ಬಳಿ ಇದ್ದ ಪಿಸ್ತೂಲಿನಿಂದ ಚರ್ಬಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಆತನನ್ನು ಬಂಧಿಸಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಪಿಎಸ್‌ಐ ಕೂಡ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರರಕಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು