6:32 AM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಜಲಕ್ಷಾಮದ ನಡುವೆ ಈಜುಕೊಳ: ಮತ್ತೊಂದು ವಿವಾದದಲ್ಲಿ ಬ್ರಿಟನ್ ಪ್ರಧಾನಿ ಅಭ್ಯರ್ಥಿ ರಿಷಿ ಸುನಾಕ್

16/08/2022, 19:09

ಲಂಡನ್(reporterkarnataka.com): ಬ್ರಿಟನ್ ಪ್ರಧಾನಿ ಅಭ್ಯರ್ಥಿ ರಿಷಿ ಸುನಾಕ್ ಈಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಇಂಗ್ಲೆಂಡಿನ ಹಲವೆಡೆ ಕ್ಷಾಮದ ಪರಿಸ್ಥಿತಿ ಇರುವಾಗ ತಮ್ಮ ಮನೆಯಲ್ಲಿ 3.8 ಕೋಟಿ ರೂಪಾಯಿ ವೆಚ್ಚದ ಈಜುಕೊಳ ನಿರ್ಮಿಸಿದ್ದಾರೆ ಎಂಬ ಟೀಕೆಗೆ ಗುರಿಯಾಗಿದ್ದಾರೆ.

ನಾರ್ಥ್ ಯಾರ್ಕ್‌ಶೈರ್‌ನಲ್ಲಿನ ತನ್ನ ಬಂಗಲೆಯಲ್ಲಿ ಸುನಾಕ್ 3.8 ಕೋಟಿ ರೂ. ವೆಚ್ಚದಲ್ಲಿ ಈಜುಕೊಳ ನಿರ್ಮಿಸಿದ್ದು ಅವರು ಪತ್ನಿ, ಇಬ್ಬರು ಮಕ್ಕಳೊಂದಿಗೆ ಇಲ್ಲಿ ವಾರಾಂತ್ಯ ಹಾಗೂ ರಜೆಯನ್ನು ಮೋಜಿನಿಂದ ಕಳೆಯುತ್ತಿದ್ದಾರೆ ಎಂದು ‘ಡೈಲಿ ಮೈಲ್’ ವರದಿ ಮಾಡಿದೆ. ಅಲ್ಲದೆ ಈ ಬಂಗಲೆಯಲ್ಲಿ ಟೆನಿಸ್ ಕೋರ್ಟ್ ಹಾಗೂ ಜಿಮ್ ಅನ್ನೂ ನಿರ್ಮಿಸಲಾಗುತ್ತಿದೆ. ಆಗಸದಿಂದ ತೆಗೆಯಲಾಗಿರುವ ಈ ಪ್ರದೇಶದ ಚಿತ್ರದಲ್ಲಿ ಈಜುಕೊಳ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿರುವುದು ದೃಢಪಟ್ಟಿದೆ ಎಂದು ವರದಿ ಹೇಳಿದೆ. ಕ್ಷಾಮದ ಹಿನ್ನೆಲೆಯಲ್ಲಿ ನೀರಿನ ಖರ್ಚು ಮಿತಗೊಳಿಸಲು ನಗರದಲ್ಲಿನ ಸಾರ್ವಜನಿಕ ಈಜುಕೊಳವನ್ನು ಮುಚ್ಚಿರುವ ಸಂದರ್ಭದಲ್ಲಿ ಜನಪ್ರತಿನಿಧಿಯೊಬ್ಬರು ಈ ರೀತಿ ಮಾಡುತ್ತಿರುವುದು ಸರಿಯೇ ಎಂದು ವ್ಯಾಪಕ ಖಂಡನೆ, ಟೀಕೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು