9:32 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

17/08/2022, 08:49

ನೆಲ್ಯಾಡಿ(reporterkarnataka.com):
ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಶನಿವಾರ ನಡೆಯಿತು.

ದೈಹಿಕ ಶಿಕ್ಷಣ ನಿರ್ದೇಶಕ ಆನಂದ ಕೆ,ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿತು. ಅಧ್ಯಕ್ಷತೆಯನ್ನು ಡಾ.ಜಯರಾಜ್ ಎನ್.(ಸಂಯೋಜಕರು ವಿ.ವಿ. ಕಾಲೇಜು ನೆಲ್ಯಾಡಿ)  ಅವರ ಅನುಪಸ್ಥಿತಿಯಲ್ಲಿ ಡಾ. ಸೀತಾರಾಮ ಪಿ. (ಸಹ ಸಂಯೋಜಕ ವಿ.ವಿ. ಕಾಲೇಜು ನೆಲ್ಯಾಡಿ) ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ ಮತ್ತು ತರಬೇತುದಾರರಾದ ಮನೋಜ್ ಕೆ.ವಿ. ಭಾಗವಹಿಸಿದರು. 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಅನುಭವಗಳನ್ನು ತೆರೆದಿಡುತ್ತಾ, “ಪರಿಶ್ರಮ ಶಿಸ್ತಿನಿಂದ ಹಳ್ಳಿಯಿಂದಲೂ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗಲು ಸಾಧ್ಯ. ಇದಕ್ಕಾಗಿ ಅವಕಾಶಗಳನ್ನು ಬಳಸಿಕೊಳ್ಳಬೇಕು” ಎಂದರು. 

ಕಾರ್ಯಕ್ರಮದಲ್ಲಿ ಉಷಾ ಅಂಚನ್, (ಅಧ್ಯಕ್ಷರು, ಅನುಷ್ಠಾನ ಸಮಿತಿ, ವಿ.ವಿ. ಕಾಲೇಜು ನೆಲ್ಯಾಡಿ)ಅವರು ಮಾತನಾಡಿ, ಪ್ರತಿಭೆಗಳು ಅವಕಾಶಗಳನ್ನು ಬಳಸಿಕೊಳ್ಳುವುದರೊಂದಿಗೆ ಬೆಳೆಯಲಿ, ಗುರುತಿಸಿಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಪ್ರಾರ್ಥನೆಯ ಮುಖಾಂತರ ಚಾಲನೆ ನೀಡಿದರು. ವೆರೋನಿಕಾ ಪ್ರಭಾ ವಿ. ಪಿ. ಸ್ವಾಗತಿಸಿದರು. ಮುಖ್ಯ ಅತಿಥಿಗಳಾದ ಮನೋಜ್ ಕೆ. ವಿ.  ಅವರ ಪರಿಚಯವನ್ನು ಆನಂದ ಕೆ. ದೈಹಿಕ ನಿರ್ದೇಶಕರು ಮಾಡಿದರು. ಡಾ. ನೂರಂದಪ್ಪ, (ಮುಖ್ಯಸ್ಥರು, ಕನ್ನಡ ವಿಭಾಗ)ವಂದಿಸಿದರು. ದಿವ್ಯಶ್ರೀ ಜಿ, (ವಾಣಿಜ್ಯ ವಿಭಾಗ,) ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು