11:15 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

17/08/2022, 08:49

ನೆಲ್ಯಾಡಿ(reporterkarnataka.com):
ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಶನಿವಾರ ನಡೆಯಿತು.

ದೈಹಿಕ ಶಿಕ್ಷಣ ನಿರ್ದೇಶಕ ಆನಂದ ಕೆ,ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿತು. ಅಧ್ಯಕ್ಷತೆಯನ್ನು ಡಾ.ಜಯರಾಜ್ ಎನ್.(ಸಂಯೋಜಕರು ವಿ.ವಿ. ಕಾಲೇಜು ನೆಲ್ಯಾಡಿ)  ಅವರ ಅನುಪಸ್ಥಿತಿಯಲ್ಲಿ ಡಾ. ಸೀತಾರಾಮ ಪಿ. (ಸಹ ಸಂಯೋಜಕ ವಿ.ವಿ. ಕಾಲೇಜು ನೆಲ್ಯಾಡಿ) ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ ಮತ್ತು ತರಬೇತುದಾರರಾದ ಮನೋಜ್ ಕೆ.ವಿ. ಭಾಗವಹಿಸಿದರು. 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಅನುಭವಗಳನ್ನು ತೆರೆದಿಡುತ್ತಾ, “ಪರಿಶ್ರಮ ಶಿಸ್ತಿನಿಂದ ಹಳ್ಳಿಯಿಂದಲೂ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗಲು ಸಾಧ್ಯ. ಇದಕ್ಕಾಗಿ ಅವಕಾಶಗಳನ್ನು ಬಳಸಿಕೊಳ್ಳಬೇಕು” ಎಂದರು. 

ಕಾರ್ಯಕ್ರಮದಲ್ಲಿ ಉಷಾ ಅಂಚನ್, (ಅಧ್ಯಕ್ಷರು, ಅನುಷ್ಠಾನ ಸಮಿತಿ, ವಿ.ವಿ. ಕಾಲೇಜು ನೆಲ್ಯಾಡಿ)ಅವರು ಮಾತನಾಡಿ, ಪ್ರತಿಭೆಗಳು ಅವಕಾಶಗಳನ್ನು ಬಳಸಿಕೊಳ್ಳುವುದರೊಂದಿಗೆ ಬೆಳೆಯಲಿ, ಗುರುತಿಸಿಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಪ್ರಾರ್ಥನೆಯ ಮುಖಾಂತರ ಚಾಲನೆ ನೀಡಿದರು. ವೆರೋನಿಕಾ ಪ್ರಭಾ ವಿ. ಪಿ. ಸ್ವಾಗತಿಸಿದರು. ಮುಖ್ಯ ಅತಿಥಿಗಳಾದ ಮನೋಜ್ ಕೆ. ವಿ.  ಅವರ ಪರಿಚಯವನ್ನು ಆನಂದ ಕೆ. ದೈಹಿಕ ನಿರ್ದೇಶಕರು ಮಾಡಿದರು. ಡಾ. ನೂರಂದಪ್ಪ, (ಮುಖ್ಯಸ್ಥರು, ಕನ್ನಡ ವಿಭಾಗ)ವಂದಿಸಿದರು. ದಿವ್ಯಶ್ರೀ ಜಿ, (ವಾಣಿಜ್ಯ ವಿಭಾಗ,) ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು