6:40 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

17/08/2022, 08:49

ನೆಲ್ಯಾಡಿ(reporterkarnataka.com):
ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಶನಿವಾರ ನಡೆಯಿತು.

ದೈಹಿಕ ಶಿಕ್ಷಣ ನಿರ್ದೇಶಕ ಆನಂದ ಕೆ,ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿತು. ಅಧ್ಯಕ್ಷತೆಯನ್ನು ಡಾ.ಜಯರಾಜ್ ಎನ್.(ಸಂಯೋಜಕರು ವಿ.ವಿ. ಕಾಲೇಜು ನೆಲ್ಯಾಡಿ)  ಅವರ ಅನುಪಸ್ಥಿತಿಯಲ್ಲಿ ಡಾ. ಸೀತಾರಾಮ ಪಿ. (ಸಹ ಸಂಯೋಜಕ ವಿ.ವಿ. ಕಾಲೇಜು ನೆಲ್ಯಾಡಿ) ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ ಮತ್ತು ತರಬೇತುದಾರರಾದ ಮನೋಜ್ ಕೆ.ವಿ. ಭಾಗವಹಿಸಿದರು. 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಅನುಭವಗಳನ್ನು ತೆರೆದಿಡುತ್ತಾ, “ಪರಿಶ್ರಮ ಶಿಸ್ತಿನಿಂದ ಹಳ್ಳಿಯಿಂದಲೂ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗಲು ಸಾಧ್ಯ. ಇದಕ್ಕಾಗಿ ಅವಕಾಶಗಳನ್ನು ಬಳಸಿಕೊಳ್ಳಬೇಕು” ಎಂದರು. 

ಕಾರ್ಯಕ್ರಮದಲ್ಲಿ ಉಷಾ ಅಂಚನ್, (ಅಧ್ಯಕ್ಷರು, ಅನುಷ್ಠಾನ ಸಮಿತಿ, ವಿ.ವಿ. ಕಾಲೇಜು ನೆಲ್ಯಾಡಿ)ಅವರು ಮಾತನಾಡಿ, ಪ್ರತಿಭೆಗಳು ಅವಕಾಶಗಳನ್ನು ಬಳಸಿಕೊಳ್ಳುವುದರೊಂದಿಗೆ ಬೆಳೆಯಲಿ, ಗುರುತಿಸಿಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಪ್ರಾರ್ಥನೆಯ ಮುಖಾಂತರ ಚಾಲನೆ ನೀಡಿದರು. ವೆರೋನಿಕಾ ಪ್ರಭಾ ವಿ. ಪಿ. ಸ್ವಾಗತಿಸಿದರು. ಮುಖ್ಯ ಅತಿಥಿಗಳಾದ ಮನೋಜ್ ಕೆ. ವಿ.  ಅವರ ಪರಿಚಯವನ್ನು ಆನಂದ ಕೆ. ದೈಹಿಕ ನಿರ್ದೇಶಕರು ಮಾಡಿದರು. ಡಾ. ನೂರಂದಪ್ಪ, (ಮುಖ್ಯಸ್ಥರು, ಕನ್ನಡ ವಿಭಾಗ)ವಂದಿಸಿದರು. ದಿವ್ಯಶ್ರೀ ಜಿ, (ವಾಣಿಜ್ಯ ವಿಭಾಗ,) ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು