11:15 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು ಶ್ರೀ ವೆಂಕಟರಮಣ ದೇವಳದಲ್ಲಿ  ಶ್ರೀರಾಮ ಪಟ್ಟಾಭಿಷೇಕ: ಸುಂದರಕಾಂಡ ಹವನ 

17/08/2022, 21:08

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು (reporterkarnataka.com): ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ 
ನಡೆಯುತ್ತಿದ್ದು,ಶ್ರೀ ವೆಂಕಟರಮಣ ದೇವಸ್ಥಾನ ದಲ್ಲಿ ಸುಂದರಕಾಂಡ ಹವನ ನಡೆಯಿತು. ಇದರ ಪ್ರಯುಕ್ತ ” ಶ್ರೀ ರಾಮ ಪಟ್ಟಾಭಿಷೇಕ ” ಜರುಗಿತು. ಈ ಸಂದರ್ಭದಲ್ಲಿ ವಿಶೇಷ ಅಭಿಷೇಕಗಳು , ಅಷ್ಟಾವಧಾನ ಸೇವೆ, ಕೋಲಾಟ , ಭರತನಾಟ್ಯ ಸೇವೆಗಳು ನಡೆದವು, ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರ ಪಟ್ಟಾಭಿಷೇಕ ನೆರವೇರಿತು.


ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಕೆ ಗಣೇಶ್ ಕಾಮತ್ , ಜಗನ್ನಾಥ್ ಕಾಮತ್ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ ಚಾತುರ್ಮಾಸ  ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್ , ಬಿ . ಆರ್ . ಭಟ್ , ನಾಮದೇವ್ ಮಲ್ಯ , ಗಣಪತಿ ಪೈ , ಸುರೇಶ್ ಕಾಮತ್ ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು